newsics.com
ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಕೆಲವು ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನ ಭಾರಿ ಮಳೆ-ಚಳಿ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನ ಮಿಜೋರಾಂ, ಅಸ್ಸಾಂ, ಮೇಘಾಲಯ ಮಣಿಪುರ, , ನಾಗಾಲ್ಯಾಂಡ್, ತ್ರಿಪುರದಲ್ಲಿ ಬೆಳ್ಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದ್ದು, ಚಳಿ ಹೆಚ್ಚಾಗಲಿದೆ.
ಹಾಗೂ . ಜನವರಿ 22 ಮತ್ತು 23ರಂದು ಉತ್ತರ ಭಾರತದ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನದ ಉತ್ತರ ಭಾಗದ ಜಿಲ್ಲೆಗಳ, ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ರಾಜ್ಯದ ಕೆಲವು ಪ್ರದೇಶಗಳಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕ ಸೇರಿ ಎಲ್ಲ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ ತೀವ್ರ ಚಳಿಯು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.