newsics.com
ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ಮತ್ತೊಮ್ಮೆ ಹಲ್ಲೆಯಾಗಿದ್ದು, ಮೂಗಿನಿಂದ ರಕ್ತ ಸುರಿಯುವಂತೆ ಥಳಿಸಲಾಗಿದೆ.
ಸಹಕಾರ ನಗರದಲ್ಲಿ ನಡೆದ ಈ ಘಟನೆ ಅಣ್ಣಮ್ಮ ಕೂರಿಸುವ ವಿಚಾರಕ್ಕೆ ಸಂಬಂಧಿಸಿದೆ ಎನ್ನಲಾಗಿದ್ದು, ನೂರಾರು ಜನರು ಹಲ್ಲೆ ನಡೆಸಿದ್ದಾರೆ.
ಕೊಡಗೆಹಳ್ಳಿ ಪೊಲೀಸರ ಜೊತೆ ಜೀಪ್ ನಲ್ಲಿ ಹೋಗುತ್ತಿರುವುದನ್ನು ಫೇಸ್ಬುಕ್ ಲೈವ್ ಮೂಲಕ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ವಕೀಲ ಜಗದೀಶ್ಪ್ರಶ್ನೆ ಮಾಡಿದ್ದಾರೆ. ಪೊಲೀಸ್ ಜೀಪ್ನಲ್ಲಿ ತಮ್ಮನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆಯು ಅಣ್ಣಮ್ಮಕೂರಿಸೋ ವಿಚಾರದಲ್ಲಿ, ಕಾರ್ ಪಾರ್ಕಿಂಗ್ ಬಗ್ಗೆ ಜಗದೀಶ್ ಗಲಾಟೆ ಮಾಡಿಕೊಂಡಿದ್ದರು. ಅಲ್ಲದೇ ಡ್ರಗ್ಸ್ ವಿರುದ್ಧ ಧ್ವನಿ ಮಾಡಿದ್ದಕ್ಕೂ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವೆಡೆ ವಕೀಲ ಜಗದೀಶ್ ಕೂಡ ಕೈ ಮಾಡಿದ್ದಾರೆ ಅನ್ನೋ ಆರೋಪಗಳಿವೆ.