newsics.com
ಬೆಂಗಳೂರು : ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿತು.
ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು.