newsics.com
ಬೆಂಗಳೂರು: ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ರಾತ್ರೋರಾತ್ರಿ ಮನೆಬಿಟ್ಟು ಹೋಗಿದ್ದಾನೆ.
ನಗರದ ಬಿಇಎಲ್ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಪೋಷಕರು ವಿದ್ಯಾರಣ್ಯಪುರ ನಿವಾಸಿಯಾಗಿದ್ದಾರೆ.
ಜ.16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೆ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮುನ್ನ “ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ ನನ್ನನ್ನು ಹುಡುಕಲು ಪ್ರಯತ್ನ ಮಾಡಬೇಡಿ. ಜಗತ್ತಿನ ಜನರ ಕಲ್ಯಾಣಕ್ಕಾಗಿ ದೇವರು ನನ್ನನ್ನು ಆರಿಸಿಕೊಂಡಿದ್ದಾನೆ. ಈ ರಾಜ ಜೀವನವನ್ನು ತೊರೆದು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ” ಎಂದು ಪತ್ರ ಬರೆದಿಟ್ಟು ಮನೆಯಲ್ಲೇ ಮೊಬೈಲ್ ಬಿಟ್ಟು ತೆರಳಿದ್ದಾನೆ.
ಪುತ್ರ ನಾಪತ್ತೆಯಾಗಿರುವ ಬಗ್ಗೆ ಮೋಹಿತ್ ಋಷಿಯ ತಂದೆ ಅರ್ಜುನ್ ಕುಮಾರ್ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮೋಹಿತ್ಗಾಗಿ ಶೋಧ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಮೋಹಿತ್ ಭಾವಚಿತ್ರವನ್ನು ಪೋಷಕರು ಹಂಚಿಕೊಂಡಿದ್ದು, ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್ ಇರಬಹುದು!
SIM Card Validity ಸಿಮ್ ಕಾರ್ಡ್ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI
Mahakumba Monalisa ಕುಂಭಮೇಳ ಸುಂದರಿ ಟೆಂಟ್ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ ಮೇಲೆ ಹಲ್ಲೆ
ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ