Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyber crime ಬ್ಯಾಂಕ್‌ನಲ್ಲೂ ಸೈಬರ್ ದರೋಡೆ: 2 ಕೋಟಿಗೂ ಹೆಚ್ಚು ಹಣ ವಂಚಕರ ಪಾಲು, ಖಾತೆದಾರರು‌ ಕಂಗಾಲು
ಕರ್ನಾಟಕಪ್ರಮುಖ

Cyber crime ಬ್ಯಾಂಕ್‌ನಲ್ಲೂ ಸೈಬರ್ ದರೋಡೆ: 2 ಕೋಟಿಗೂ ಹೆಚ್ಚು ಹಣ ವಂಚಕರ ಪಾಲು, ಖಾತೆದಾರರು‌ ಕಂಗಾಲು

Share
1 Min Read
SHARE

newsics.com

ಬೆಂಗಳೂರು: ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಶೂಟೌಟ್ ಮಾಡಿದ್ದಾಯ್ತು, ಮಂಗಳೂರಿನ ಉಳ್ಳಾಲದಲ್ಲಿ ಕೋಟೆಕಾರು ಬ್ಯಾಂಕ್ ದರೋಟೆ ಆಯ್ತು, ಇದೀಗ ವಿಜಯನಗರದಲ್ಲಿಯೂ ಬ್ಯಾಂಕ್‌ನಲ್ಲಿ ಸೈಬರ್ ದರೋಡೆ ನಡೆದಿದೆ.

ಸಹಕಾರಿ ಬ್ಯಾಂಕೊಂದರಿಂದ ಸೈಬರ್ ವಂಚಕರು 2 ಕೋಟಿ ರೂಪಾಯಿಗೂ ಹೆಚ್ಚು ದರೋಡೆ ನಡೆಸಿರುವುದು ತಡವಾಗಿ ವರದಿಯಾಗಿದೆ.

ವಿಜಯನಗರ ಮತ್ತು ಬಳ್ಳಾರಿ ಅವಳಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಕೆಲವು ಶಾಖೆಗಳಲ್ಲಿ ಗ್ರಾಹಕರು ತಮ್ಮ ಖಾತೆಗೆ ಹಣ ಜಮೆ ಆಗುತ್ತಿಲ್ಲ ಎಂದು ದೂರುಗಳನ್ನು ಸಲ್ಲಿಸಿದ ನಂತರ ದೊಡ್ಡ ಮೊತ್ತದ ಹಣ ದರೋಡೆಯಾಗಿರುವುದು ಪತ್ತೆಯಾಗಿದೆ.

ಬಿಡಿಸಿಸಿ ಬ್ಯಾಂಕ್‌ನಿಂದ ಐಡಿಬಿಐ ಬ್ಯಾಂಕ್‌ಗೆ ವಾಡಿಕೆಯಂತೆ ಹಣ ವರ್ಗಾವಣೆಯ ಸಮಯದಲ್ಲಿ, 2025 ರ ಜನವರಿ 10 ರಂದು ಹ್ಯಾಕರ್‌ಗಳು ಎಕ್ಸ್ಎಂಎಲ್ ಫೈಲ್‌ಗಳಲ್ಲಿನ ಖಾತೆ ಸಂಖ್ಯೆಗಳು ಮತ್ತು ಐಎಫ್ಎಸ್ಸಿ ಕೋಡ್‌ಗಳನ್ನು ಬದಲಾಯಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಫಲಾನುಭವಿಗಳ ಹೆಸರುಗಳು ಬದಲಾಗದೆ ಉಳಿದಿದ್ದರೂ, ಯಾರ ಖಾತೆಗೆ ಹಣ ವರ್ಗಾವಣೆಯಾಗಬೇಕಿತ್ತೋ ಅವುಗಳ ಬದಲಿಗೆ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿನ 25 ವಿಭಿನ್ನ ಖಾತೆಗಳಿಗೆ ಹಣ ಜಮೆ ಆಗಿರುವುದು ಗೊತ್ತಾಗಿದೆ.

ಜನವರಿ 10 ರಿಂದ ಆನ್‌ಲೈನ್ ಹಣ ವರ್ಗಾವಣೆಗಳು ಉದ್ದೇಶಿತ ಗ್ರಾಹಕರ ಖಾತೆಗಳಿಗೆ ಜಮೆಯಾಗಿಲ್ಲ ಎಂಬ ಬಗ್ಗೆ ಹಲವು ಶಾಖೆಗಳು ವರದಿ ಮಾಡಿದ ನಂತರ ಜನವರಿ 13ರಂದು ಆನ್ಲೈನ್ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.

ಐದು ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಹಿವಾಟುಗಳು ಇತರ ಖಾತೆಗಳಿಗೆ ಜಮೆ ಆಗಿರುವುದು ಬ್ಯಾಂಕ್‌ನ ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ಬ್ಯಾಂಕ್ ತನ್ನ ಆರ್‌ಟಿಜಿಎಸ್/ನೆಫ್ಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಪೊಲೀಸರು ಪ್ರಕರಣವನ್ನು ಬಳ್ಳಾರಿ ಸಿಇಎನ್ (ಸೈಬರ್ ಎಕನಾಮಿಕ್ ನಾರ್ಕೋಟಿಕ್ಸ್) ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.

ಐಷಾರಾಮಿ ಮನೆ ಮಾರಿದ ನಟ ಅಕ್ಷಯ್ ಕುಮಾರ್..akshay kumar apartment

IAS officers transfer 12 ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

Hot actress now nun! ಅಂದಿನ ಹಾಟ್ ಹಾಟ್ ನಟಿ ಈಗ ಸನ್ಯಾಸಿನಿ!

TAGGED:account holders distressedCyber ​​robbery in the bank too: more than 2 crores of money stolen
Share This Article
Facebook Twitter Copy Link Print
Previous Article Health Care ಬೆಳ್ಳುಳ್ಳಿ ಪೇಸ್ಟ್ ಹಚ್ಚಿಕೊಳ್ಳಿ… ಕೂದಲು ಉಳಿಸಿಕೊಳ್ಳಿ…
Next Article GOOD MORNING ಸುಪ್ರಭಾತ, ಪುಷ್ಯ ಮಾಸ ಕೃಷ್ಣ ಪಕ್ಷ ಏಕಾದಶಿ, 25-01-2025, ಶನಿವಾರ, ಷಟ್ತಿಲಾ‌ ಏಕಾದಶಿ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?