newsics.com
ಬೆಂಗಳೂರು: ಖೋ ಖೋ ವಿಶ್ವಕಪ್ ಗೆದ್ದ ಭಾರತ ಪುರುಷರ ಮತ್ತು ಮಹಿಳಾ ತಂಡದಲ್ಲಿದ್ದ ಕರ್ನಾಟಕದ ಎಂ.ಕೆ. ಗೌತಮ್ ಹಾಗೂ ಚೈತ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದ 5 ಲಕ್ಷ ರೂಪಾಯಿ ಬಹುಮಾನ ತಿರಸ್ಕರಿಸುವುದಾಗಿ ಹೇಳಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಮತ್ತು ಚೈತ್ರಾ ಅವರು, ಖೋ ಖೋ ಆಟಕ್ಕೆ ನಮ್ಮ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದ್ದಾರೆ.
ನಾವು ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬಂದ ನಂತರ ಸಿಎಂ ಕೇವಲ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಆಟಗಾರರಿಗೆ ದೊಡ್ಡ ಮೊತ್ತದ ಬಹುಮಾನ ಘೋಷಿಸುವುದರ ಜತೆಗೆ ಎ ದರ್ಜೆಯ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ. ನಮಗೆ ಆ ರೀತಿಯ ಯಾವ ಸೌಲಭ್ಯ ಕೊಡದೆ ಇರುವುದು ಬೇಸರ ತಂದಿದೆ ಎಂದಿದ್ದಾರೆ.
Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ ನಿಖಿತಾ ನಯ್ಯಾರ್ ಇನ್ನಿಲ್ಲ
Monkeys attack | ಮಂಗಗಳ ದಾಳಿಗೆ ಟೆರೇಸ್ನಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಲಿ
Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ