newsics.com
ಕೊಪ್ಪಳ: ಹದಿನೇಳು ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಜಯೇಶ್ ಯಾದವ್ ಮೃತ ದುರ್ದೈವಿ. ಕೊಪ್ಪಳ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಜಯೇಶ್ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಸ್ನೇಹಿತರೊಂದಿಗೆ ಅಂಜನಾದ್ರಿ ಬೆಟ್ಟ ಹತ್ತಿ ಇನ್ನೇನು ದರ್ಶನ ಪಡೆಯಬೇಕು ಎನ್ನುವಷ್ಟರಲ್ಲೇ ಹೃದಯಾಘಾತವಾಗಿದೆ. ಆಸ್ಪತ್ರೆಗೆ ತಲುಪುವ ಮುನ್ನವೇ ಜಯೇಶ್ ಉಸಿರು ನಿಂತು ಹೋಗಿತ್ತು. ಹೃದಯಾಘಾತದಿಂದ ಜಯೇಶ್ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದದಾರೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.