newsics.com
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಮೋಡಗಳು ಸೃಷ್ಟಿಯಾಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಕಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಕೆಲವೆಡೆ ಚಳಿಯ ತೀವ್ರತೆ ಕಡಿಮೆಯಾಗತೊಡಗಿದೆ ಎನ್ನಲಾಗಿದೆ.
Stamped in mahakumbh ಮಹಾ ಕುಂಭದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಭಕ್ತರ ಸಾವು, ಹಲವರಿಗೆ ಗಾಯ
suspected car found near Ankola| ಅಂಕೋಲಾ ಬಳಿ ಪತ್ತೆಯಾದ ಶಂಕಿತ ಕಾರಲ್ಲಿ 1 ಕೋಟಿಗೂ ಹೆಚ್ಚು ಹಣ!
blood pressure : ಅಪ್ಪಿತಪ್ಪಿಯೂ ಇವುಗಳನ್ನು ತಿನ್ನಬೇಡಿ.. ಅಪಾಯ ಕಟ್ಟಿಟ್ಟ ಬುತ್ತಿ