newsics.com
ಪ್ರಯಾಗ್ರಾಜ್: ಮಹಾಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನೇ ದಿನ ಹೆಚ್ಚುತ್ತಲೇ ಇದೆ. ಸೋಮವಾರ (ಫೆ.3) ಬಸಂತ ಪಂಚಮಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಗರಾಜ್ಗೆ ಆಗಮಿಸುತ್ತಿದ್ದಾರೆ. ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನೂ ಘೋಷಿಸಿದೆ.
ಈ ನಡುವೆ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರಿ ಮಹತ್ವದ ಘೋಷಣೆ ಮಾಡಿದ್ದು, ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಉಚಿತ ಪ್ರಯಾಣ, ಉಚಿತ ಊಟ ಹಾಗೂ ಉಚಿತ ಔಷಧಗಳ ‘ತೀರ್ಥ ಯಾತ್ರಿ ಸೇವಾ ಯೋಜನೆ’ ಘೋಷಣೆ ಮಾಡಿದೆ. ಈ ಯೋಜನೆ ಈಗಾಗಲೇ ಮೇಳದಲ್ಲಿ ಆರಂಭಗೊಂಡಿದೆ.
ರಿಲಯನ್ಸ್ ಕಂಪನಿಯ ವಿ ಕೇರ್ ಪರಿಕಲ್ಪನೆಯ ಅಡಿಯಲ್ಲಿ ಮಹಾಕುಂಭ ಮೇಳದ ಭಕ್ತರಿಗೆ ಸೇವೆ ನೀಡಲು ರಿಲಯನ್ಸ್ ಮುಂದಾಗಿದೆ.
ಈ ಕುರಿತು ಮಾತನಾಡಿರುವ ರಿಲಯನ್ಸ್ ಇಂಡಸ್ಟ್ರಿ ನಿರ್ದೇಶಕ ಅನಂತ್ ಅಂಬಾನಿ, ಮಹಾಕುಂಭ ಮೇಳದಲ್ಲಿ ಭಕ್ತರಿಗೆ ಸಣ್ಣ ಸೇವೆ ನೀಡುವ ಅವಕಾಶ ಒದಗಿ ಬಂದಿರುವುದು ನಮ್ಮ ಸೌಭಾಗ್ಯ ಎಂದಿದ್ದಾರೆ.
ಕೋಟ್ಯಂತರ ಭಕ್ತರ ಆರೋಗ್ಯ, ಸುರಕ್ಷತೆ, ಪ್ರಯಾಣ, ಆಹಾರ ಕುರಿತು ಕಾಳಜಿ ವಹಿಸಲಿದೆ. ಈ ಮೂಲಕ ಭಕ್ತರ ಆಧ್ಯಾತ್ಮಿಕ ಪ್ರಯಾಣ ಸುಗಮವಾಗಿಸಲು ರಿಲಯನ್ಸ್ ನೆರವಾಗಲಿದೆ ಎಂದಿದ್ದಾರೆ.
ಮಹಾಕುಂಭ ಮೇಳಕ್ಕೆ ಆಗಮಿಸವ ಭಕ್ತರಿಗೆ ಪ್ರಯಾಣದ ಸೌಲಭ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇನ್ನು ಮಹಾಕುಂಭ ಮೇಳದ ಭಕ್ತರಿಗೆ ಬಿಸಿ ಬಿಸಿ ಊಟ, ನೀರು ನೀಡುತ್ತಿದೆ. ರಿಲಯನ್ಸ್ ಅನ್ನ ಸೇವಾ ಯೋಜನೆಯಡಿ ಈ ಸೌಲಭ್ಯ ಒದಗಿಸಲಾಗಿದೆ. ರಿಲಯನ್ಸ್ ಸ್ವಯಂ ಸೇವಕರು ಮಹಾಕುಂಭ ಮೇಳದಲ್ಲಿ ಅಖಾರ, ಸಾಧು ಸಂತರು, ಭಕ್ತರಿಗೆ ಉಚಿತ ಆಹಾರ ತಲುಪಿಸುತ್ತಿದ್ದಾರೆ.
ರಿಲಯನ್ಸ್ ಆರೋಗ್ಯ ಸುವಿಧಾ ಯೋಜನೆ ಮೂಲಕ ಉಚಿತ ಆರೋಗ್ಯ ಕಾಳಜಿ ವಹಿಸುತ್ತಿದೆ. ಪುಊರುಷ ಹಾಗೂ ಮಹಿಳಾ ಪ್ರತ್ಯೇಕ ಒಪಿಡಿ ಕೇಂದ್ರಗಳನ್ನು ತೆರೆಯಲಾಗಿದೆ. ಇದೇ ವೇಳೆ ಮಹಿಳಾ ಭಕ್ತರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ಸ್ ಸೇರಿದಂತೆ ಹಲವು ಸೌಲಭ್ಯ ನೀಡಲಾಗುತ್ತಿದೆ.
Loot Jewellery ತಿರುಪತಿಯಲ್ಲಿ ಕಳ್ಳತನ: 4 ವಿಲ್ಲಾಗಳಿಗೆ ನುಗ್ಗಿ ಒಂದೂವರೆ ಕೆಜಿ ಚಿನ್ನಾಭರಣ ಲೂಟಿ
ಸರ್ಕಾರಿ ಕಾಲೇಜಿನ ಶೌಚಾಲಯದಲ್ಲೇ ಹೆರಿಗೆ: ಕಸದ ಬುಟ್ಟಿಯಲ್ಲಿ ಶಿಶು ಬಚ್ಚಿಟ್ಟ ವಿದ್ಯಾರ್ಥಿನಿ!
Donald Trump ಕೆನಡಾ, ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ