Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈತರ ಸಂಕಷ್ಟ ಅರಿಯಲು ಮಾರುವೇಷದಲ್ಲಿ ಬಂದ ಜಿಲ್ಲಾಧಿಕಾರಿ
ದೇಶಪ್ರಮುಖ

ರೈತರ ಸಂಕಷ್ಟ ಅರಿಯಲು ಮಾರುವೇಷದಲ್ಲಿ ಬಂದ ಜಿಲ್ಲಾಧಿಕಾರಿ

Share
1 Min Read
SHARE

newsics.com

ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ರೈತರ ಸಂಕಷ್ಟ ಆಲಿಸಲು ಜಿಲ್ಲಾಧಿಕಾರಿಯೊಬ್ಬರು ಮಾರುವೇಷದಲ್ಲಿ ಮಂಡಿಗೆ ಭೇಟಿ ನೀಡಿದ ಘಟನೆ ಬೆಳಕಿಗೆ ಬಂದಿದೆ. ಭದ್ರಾಕ್ ಜಿಲ್ಲಾಧಿಕಾರಿ ದಿಲೀಪ್ ರೂಟ್ರಾಯ್, ರೈತರಂತೆ ಮಂಡಿಗೆ ತೆರಳಿ‌ ಧಾನ್ಯದ ಮೌಲ್ಯಮಾಪನದಲ್ಲಿ ಅನ್ಯಾಯಿಕ ಬೆಲೆ ಕಡಿತ ಆರೋಪಗಳ ಬಗ್ಗೆ ತನಿಖೆ ನಡೆಸಿದ್ದಾರೆ.

ಕಥಾಸಾಹಿ ಮಂಡಿಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ತಮ್ಮ ವಾಹನವನ್ನು ದೂರದಲ್ಲಿ ನಿಲ್ಲಿಸಿ, ರೈತನಂತೆ ಸರಳ ಉಡುಗೆ ಧರಿಸಿ ಮುಖಗವಸು ಧರಿಸಿಕೊಂಡು ಮಂಡಿಗೆ ಭೇಟಿ ನೀಡಿದ್ದರು. ತಮ್ಮ ಗುರುತು ಬಹಿರಂಗಪಡಿಸದೆ, ಅವರು ರೈತರೊಂದಿಗೆ ಸಂವಾದ ನಡೆಸಿ, ಭತ್ತದ ಮಾರಾಟದ ಬಗ್ಗೆ ವಿಚಾರಿಸಿದ್ದಾರೆ. ನಂತರ, ಅವರು ಮತ್ತೊಬ್ಬ ರೈತನ ಟೋಕನ್ ಬಳಸಿ ಭತ್ತ ಮಾರಾಟ ಮಾಡಲು ಪ್ರಯತ್ನಿಸಿದ್ದು, ಆದರೆ, ಸಹಕಾರಿ ಅಧಿಕಾರಿಯು ಸುಮಾರು 8 ಕೆಜಿ ಭತ್ತವನ್ನು ವ್ಯರ್ಥ ಎಂದು ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ.

ರೈತರ ಆರೋಪಗಳು ನಿಜವೆಂದು ಕಂಡುಬಂದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ರೂಟ್ರಾಯ್ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಕಥಾಸಾಹಿ PACS (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ) ಕಾರ್ಯದರ್ಶಿಗೆ ನೀಡಲಾದ ಶೋಕಾಸ್ ನೋಟಿಸ್‌ನಲ್ಲಿ, “ನಿಮ್ಮ PACS ವಿರುದ್ಧ ಮಾಡಲಾದ ಆರೋಪಗಳು ನಿಜವೆಂದು ಕಂಡುಬಂದಿದೆ. ಆದ್ದರಿಂದ ನಿಮ್ಮ ವಿರುದ್ಧ ಸೂಕ್ತ ಕ್ರಮವನ್ನು ಏಕೆ ತೆಗೆದುಕೊಳ್ಳಬಾರದು ಎಂಬುದನ್ನು ನಿಮ್ಮಿಂದ ವಿವರಣೆ ಕೇಳಲಾಗುತ್ತದೆ” ಎಂದು ತಿಳಿಸಲಾಗಿದೆ.

ನೋಟಿಸ್ ಸ್ವೀಕರಿಸಿದ ಎರಡು ದಿನಗಳ ಒಳಗೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದ್ದು, ತಪ್ಪಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ. “ರೈತರು PACS ಮತ್ತು ಮಿಲರ್‌ಗಳ ಕುತಂತ್ರಕ್ಕೆ ಬಲಿಯಾಗುತ್ತಿದ್ದಾರೆ” ಎಂಬ ಬಗ್ಗೆ ವಿವಿಧ ವರದಿಗಳು ಮತ್ತು ಆರೋಪಗಳನ್ನು ಸ್ವೀಕರಿಸಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇತ್ತೀಚೆಗೆ, ಭದ್ರಾಕ್‌ನ ಸಹಕಾರಿ ಸಂಘಗಳ ಸಹಾಯಕ ನೋಂದಣಾಧಿಕಾರಿ (ARCS) ಸಹ ಜಿಲ್ಲೆಯ ಹಲವಾರು PACS ಕಾರ್ಯದರ್ಶಿಗಳನ್ನು ಭೇಟಿ ಮಾಡಿ ರೈತರಿಗೆ ನಷ್ಟವಾಗದಂತೆ ನೋಡಿಕೊಳ್ಳಲು ಭರವಸೆ ನೀಡಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

TAGGED:The District Collector came in disguise to know the plight of the farmers
Share This Article
Facebook Twitter Copy Link Print
Previous Article Bomb Threat ಕಲಬುರಗಿಯ ಖಾಸಗಿ ಶಾಲೆಗೆ ಇ -ಮೇಲ್ ಮೂಲಕ ಬಾಂಬ್ ಬೆದರಿಕೆ
Next Article ದರೋಡೆ ಹಣದಿಂದ ನಟಿಯರ ಜೊತೆ ಮೋಜು ಮಾಡ್ತಿದ್ದ ಕಳ್ಳ ಅರೆಸ್ಟ್

Popular Posts

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

You Might Also Like

ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read
ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?