newsics.com
ಬೆಂಗಳೂರು: ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಆರ್.ಟಿ.ನಗರ, ಇಲವಾಲ, ರಾಮಕೃಷ್ಣನಗರ ಸೇರಿದಂತೆ 30ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ (ಫೆ.5) ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಬಿಲ್ಡರ್ಗಳ ಮನೆ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.
ಮನೆ, ಕಚೇರಿ, ಕಲ್ಯಾಣ ಮಂಟಪ ಸೇರಿ ಎಲ್ಲಾ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಸುಮಾರು 90 ವಾಹನಗಳಲ್ಲಿ ಹೋಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆ, ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ದೆಹಲಿ, ಚೆನೈ, ಗೋವಾ, ಕೋಲ್ಕತ್ತಾದಿಂದ ಬಂದ ಅಧಿಕಾರಿಗಳ ತಂಡ ಬೆಳಗ್ಗೆ 5 ಗಂಟೆಗೆ ದಾಳಿ ನಡೆಸಿದ್ದು ಭ್ರಷ್ಟರಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ನಡೆದಿದ್ದು ಮನೆ ಕಚೇರಿಗಳ ಶೋಧ ಕಾರ್ಯ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗುವ ರೀತಿ ಕಾರ್ ಗಳನ್ನು ಸಿಂಗರಿಸಿಕೊಂಡು ಬಂದು ದಾಳಿ ನಡೆಸಲಾಗಿದೆ.
ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ಮದುವೆಗೆ ಹೋಗುವ ಕಾರಿನ ರೀತಿ ಸಿಂಗರಿಸಿ ದಾಳಿ ನಡೆಸಲಾಗಿದೆ.
Nayantara ಟಾಕ್ಸಿಕ್ ಗಾಗಿ ಯಶ್ ಹುಡುಕಿಕೊಂಡು ಬೆಂಗಳೂರಿಗೆ ಬಂದ ನಯನತಾರಾ
Delhi election ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು