newsics.com
ಕೋಲ್ಕತಾ: ರಜೆ ನೀಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಸರ್ಕಾರಿ ನೌಕರನೊಬ್ಬ ತನ್ನ ಮೇಲಧಿಕಾರಿ ಸೇರಿ ನಾಲ್ವರನ್ನು ಇರಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಅಮಿತ್ ಕುಮಾರ್ ಸರ್ಕಾರ್ ಚಾಕು ಇರಿದ ಸರ್ಕಾರಿ ನೌಕರ. ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ನ್ಯೂ ಟೌನ್ ಟೆಕ್ನಿಕಲ್ ಬಿಲ್ಡಿಂಗ್ನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್, ರಜೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಅವರ ಮೇಲಧಿಕಾರಿ ರಜೆ ಅರ್ಜಿಯನ್ನು ತಿರಸ್ಕರಿಸಿದ್ದರು.
ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಮ್ಮ ಕಚೇರಿಯೊಳಗೆ ಮೇಲಧಿಕಾರಿ ಹಾಗೂ ಸಹೋದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದರು. ತಾಳ್ಮೆ ಕಳೆದುಕೊಂಡ ಸರ್ಕಾರ್ ಚಾಕುವಿನಿಂದ ದಾಳಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಘಟನೆಯಲ್ಲಿ ಅಮಿತ್ ಸರ್ಕಾರ್ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರು ಸಹ ಗಾಯಗೊಂಡಿದ್ದಾರೆ.
Crane tragedy ಗಂಗಾಪರಮೇಶ್ವರಿ ಕಳಸಾರೋಹಣ ವೇಳೆ ದುರ್ಘಟನೆ: ಓರ್ವ ಸಾವು, ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ