newsics.com
ಮೈಸೂರು: ಮುಡಾ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹಿಂದೆ ಸೆರೆದಿದಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸ್ನೇಹಮಯಿ ಕೃಷ್ಣ, ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ ಎಂದು ಹೇಳಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ, ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇಪ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.