newsics.com
ಉತ್ತರ ಪ್ರದೇಶ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಪ್ರಯಾಗ್ ರಾಜ್ ಗೆ ಭೇಟಿ ನೀಡಿದ್ದು ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ತಮ್ಮ ಭೇಟಿಯ ಸಮಯದಲ್ಲಿ, ರಾಷ್ಟ್ರಪತಿಗಳು ಮಹಾ ಕುಂಭದ ಭವ್ಯತೆ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಅನುಭವಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಸಂದರ್ಭದಲ್ಲಿ ಸಾಥ್ ನೀಡಿದರು. ವಿಶೇಷವೆಂದರೆ, ದೇಶದ ಮೊದಲ ರಾಷ್ಟ್ರಪತಿ ಡಾ.ರಾsಜೇಂದ್ರ ಪ್ರಸಾದ್ ಅವರು ಈ ಹಿಂದೆ ಮಹಾ ಕುಂಭ ಮೇಳದ ಸಮಯದಲ್ಲಿ ಪವಿತ್ರ ಸ್ನಾನ ಮಾಡಿದ್ದರು.