Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ‌ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಮಂದಿ ಸಾವು, ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ದೇಶಪ್ರಮುಖ

ದೆಹಲಿ‌ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಮಂದಿ ಸಾವು, ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ‌ ಶನಿವಾರ ರಾತ್ರಿ ಉಂಟಾದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಪ್ರಯಾಗ್‌ರಾಜ್‌‌ನ ಮಹಾಕುಂಭ ಮೇಳಕ್ಕೆ ಹೋಗುವ ಎರಡು ವಿಶೇಷ ರೈಲುಗಳು ಆಗಮಿಸಲು ತಡವಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯಿಂದ ಉಂಟಾದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ.

ಕಾಲ್ತುಳಿತದಲ್ಲಿ 15‌ ಜನ‌ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರೇ ಹೆಚ್ಚಿದ್ದಾರೆ ಎಂದು ಸಿಸಿಎಂಒ ರೀತು ಸಕ್ಸೇನಾ ತಿಳಿಸಿದ್ದಾರೆ.

ಹಠಾತ್ ನೂಕುನುಗ್ಗಲು ಉಂಟಾದ ಕಾರಣ ಜನ ಕಂಗಾಲಾದರು. ರೈಲ್ವೆ ನಿಲ್ದಾಣದ ಫ್ಲಾಟ್‌ಫಾರಂ 14 ಮತ್ತು 15ರಲ್ಲಿ ಶನಿವಾರ ರಾತ್ರಿ 9.55 ರ ಹೊತ್ತಿಗೆ ಈ ದುರಂತ ಸಂಭವಿಸಿದೆ ಎಂದು ವರದಿ ಹೇಳಿದೆ.

ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹತ್ತಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ಶಾಮಕ ದಳ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡುತ್ತಿದೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲುಗಳನ್ನು ಹತ್ತಲು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಜನಸಂದಣಿ ತೀವ್ರವಾಗಿದ್ದು ನೂಕುನುಗ್ಗಲು ಉಂಟಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾದಂತೆ ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಿಲ್ದಾಣಕ್ಕೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:more than 15 people were injuredstampede At the Delhi Railway Station
Share This Article
Facebook Twitter Copy Link Print
Previous Article Life style ಕಿಚನ್‌ ಟವಲ್‌ ಕ್ಲೀನ್ ಮಾಡಲು ಈ ಟಿಪ್ಸ್ ಟ್ರೈ ಮಾಡಿ
Next Article Stamped in Delhi railway station ದೆಹಲಿ‌ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?