newsics.com
ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶಿಸಿದೆ.
ಇದೇ ವೇಳೆ ಶೇಂಗಾ ಚಿಕ್ಕಿ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೇಂಗಾ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದ ಅಪರ್ಯಾಪ್ತ ಕೊಬ್ಬಿನಂಶ ಹೆಚ್ಚಿದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಹೀಗಾಗಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಯೋಜನೆ) ವೈ.ಸಿ. ರವಿಕುಮಾರ್ ತಿಳಿಸಿದ್ದಾರೆ.
unemployed tekki cry ದಯವಿಟ್ಟು ನನಗೊಂದು ಕೆಲಸ ಕೊಡಿ, ಸಂಬಳ ಬೇಡ: ನಿರುದ್ಯೋಗಿ ಟೆಕ್ಕಿಯ ಅಳಲು