newsics.com
ಹರಪ್ಪನಹಳ್ಳಿ: ರೈತನೋರ್ವ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದರುವ ಘಟನೆ ವಿಜಯನಗರದ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ನಡೆದಿದೆ
ಕೃಷಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಈ ರೈತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ವಿಶ್ವನಾಥ್ ಈ ಎಲ್ಲದಕ್ಕೆ ಸಾಕ್ಷಿಯಾದ ಆಧುನಿಕ ರೈತ ಎಂದು ತಿಳಿದು ಬಂದಿದೆ. ಈತನ ಜಮೀನಿನಲ್ಲಿ ಯಾವುದೇ ಕೆಲಸ ಇದ್ದರೂ ಈ ಮಹಿಳೆಯರು ಇಲ್ಲ ಎನ್ನದೇ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ, ಜಮೀನಿನ ಮಾಲೀಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಕೂಲಿ ಕಾರ್ಮಿಕರ ಆಸೆಯನ್ನು ಈ ರೈತ ಈಡೇರಿಸಿದ್ದಾನೆ. ಎಲ್ಲ ಮಹಿಳೆಯರೂ ಒಂದೇ ತರಹದ ಸೀರೆ ಧರಿಸಿದ್ದರು. ಅವರ ಕಾರ್ಯಕ್ಕೆ ಸ್ಥಳೀಯ ಜನರು ಹಾಗೂ ಮಹಿಳಾ ಕಾರ್ಮಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರೈತನೊರ್ವ, ತಮ್ಮ ಜಮೀನಿಗೆ ಖಾಯಂ ಆಗಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳಾ ಕಾರ್ಮಿಕರಿಗೆ ಏನಾದರೂ ಒಂದು ಜೀವನಪೂರ್ತಿ ಮರೆಯಲಾಗದ ಉಡುಗೊರೆ ಕೊಡಬೇಕು ಎಂದುಕೊಂಡಿದ್ದಾನೆ.
ತಾನು ಯೋಜನೆ ರೂಪಿಸಿದಂತೆ ತಮ್ಮ ಜಮೀನಿನಲ್ಲಿ ಕೆಲಸಕ್ಕೆ ಬರುತ್ತಿದ್ದ 10 ಮಹಿಳಾ ಕಾರ್ಮಿಕರಿಗೆ ಹಾಗೂ ತಮ್ಮನ್ನು ಸೇರಿದಂತೆ 11 ಜನರಿಗೆ ವಿಮಾನದಲ್ಲಿ ಗೋವಾಗೆ ಹೋಗಲು ಟಿಕೆಟ್ ಬುಕಿಂಗ್ ಮಾಡಿದ್ದಾರೆ. ನಂತರ, ಎಲ್ಲ ಕಾರ್ಮಿಕರನ್ನು ತನ್ನೊಂದಿಗೆ ಹತ್ತಿದ ವಿಮಾನ ನಿಲ್ದಾಣವಾದ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಸೀದಾ ಗೋವಾಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ.
ಪ್ರತಿದಿನ ಹೊಲದಲ್ಲಿ ಕೆಲಸ ಮಾಡುವಾಗ ತಲೆ ಎತ್ತಿ ಆಕಾಶದಲ್ಲಿ ನೋಡುತ್ತಿದ್ದ ವಿಮಾನದಲ್ಲಿ ನಾವೇ ಪ್ರಯಾಣ ಮಾಡುತ್ತಿದ್ದೇವೆ ಎಂಬ ಸಂತಸ ಮಹಿಳಾ ಕಾರ್ಮಿಕರಲ್ಲಿ ಮೂಡಿತ್ತು.