newsics.com
ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನ ದೇವಾಲಯದ ಮೇಲೆ ಮತ್ತೊಮ್ಮೆ ವಿಮಾನವೊಂದು ಹಾರಾಟ ನಡೆಸಿದ್ದು ತೀವ್ರ ವಿವಾದಕ್ಕೆ ಗುರಿಯಾಗಿದೆ.
ಆಂಧ್ರಪ್ರದೇಶ ತಿರುಮಲದ ತಿಮ್ಮಪ್ಪನ ದೇವಾಲಯದ ಮೇಲೆ ಸಾಮಾನ್ಯವಾಗಿ ಯಾವುದೇ ವಿಮಾನಗಳು ಹಾರಾಡುವುದಿಲ್ಲ. ವಿಮಾನ ಹಾರಾಟವು ಆಗಮ ಶಾಸ್ತ್ರಕ್ಕೆ ವಿರುದ್ಧವಾದದ್ದು. ಹೀಗಾಗಿ ತಲ, ತಲಾಂತರಗಳಿಂದ ತಿಮ್ಮಪ್ಪನ ದೇಗುಲದ ಮೇಲೆ ವಿಮಾನ ಹಾರಾಡುವುದನ್ನ ಭಕ್ತರು ವಿರೋಧಿಸುತ್ತಾ ಬಂದಿದ್ದಾರೆ.
ಆಂಧ್ರಪ್ರದೇಶದಲ್ಲಿ ಈ ಘಟನೆಯನ್ನ ಖಂಡಿಸಿದ್ದು, ತಕ್ಷಣವೇ ತಿರುಮಲವನ್ನು ವಿಮಾನ ಹಾರಾಟ ನಿಷೇಧಿತ ಪ್ರದೇಶ ಎಂದು ಘೋಷಿಸಲು ಆಗ್ರಹಿಸಲಾಗಿದೆ.
ತಿಮ್ಮಪ್ಪನ ದೇವಾಲಯದ ಮೇಲೆ ವಿಮಾನ ಹಾರಾಟದಿಂದ ಭಕ್ತರ ಭಾವನೆಗೆ ಧಕ್ಕೆಯಾಗುತ್ತದೆ. ಇಷ್ಟು ದಿನ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ವಿಮಾನ ಹಾರಾಟಕ್ಕೆ ಅವಕಾಶ ಕೊಟ್ಟಿರಲಿಲ್ಲ. ಇದೀಗ ಸದ್ದಿಲ್ಲದೇ ವಿಮಾನ ಹಾರಾಟ ನಡೆಸಿರೋದನ್ನು ತಿಮ್ಮಪ್ಪನ ಭಕ್ತರು ಖಂಡಿಸಿದ್ದಾರೆ