newsics.com
ಶಿರಸಿ: ಹತ್ತು ವರ್ಷದಿಂದ ಪ್ರೀತಿಸುತಿದ್ದ ಹುಡುಗಿ ಬೇರೆಯವನನ್ನು ಮದುವೆಯಾದಳೆಂಬ ಸಿಟ್ಟಿಗೆ ಯುವಕನೊಬ್ಬ ಆಕೆಯ ಗಂಡನನ್ನು ಬಸ್ನಲ್ಲೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿರಸಿ ನಗರದಲ್ಲಿ ನಡೆದಿದೆ.
KSRTC ಬಸ್ ನಿಲ್ದಾಣದ ಸಮೀಪ ನಿಂತಿದ್ದ ಬೆಂಗಳೂರು ಕೆಎಸ್ಆರ್ಟಿಸಿ ಬಸ್ನಲ್ಲಿ ಶನಿವಾರ ಈ ಘಟನೆ ನಡೆದಿದೆ.
ಸಾಗರ ತಾಲೂಕಿನ ನೀಚಡಿಯ ಗಂಗಾಧರ್ ಹತ್ಯೆಯಾದವ. ಪ್ರೀತಮ್ ಡಿಸೋಜ ಚಾಕುವಿನಿಂದ ಇರಿದು ಕೊಲೆ ಮಾಡಿದ ವ್ಯಕ್ತಿ. ಪ್ರೀತಮ್ ಡಿಸೋಜಾ ಸ್ಥಳದಿಂದ ಪರಾರಿಯಾಗಿದ್ದರೂ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
ಕಳೆದ ಹತ್ತು ವರ್ಷದಿಂದ ಶಿರಸಿಯ ಯುವತಿಯನ್ನು ಪ್ರೀತಮ್ ಡಿಸೋಜ ಪ್ರೀತಿಸುತ್ತಿದ್ದ. ಆಕೆಯೂ ಈತನನ್ನು ಪ್ರೀತಿಸುತಿದ್ದಳು. ಆದರೆ ಕೆಲಸಕ್ಕಾಗಿ ಬೆಂಗಳೂರಿಗೆ ಹೋದ ಯುವತಿ, ಅಲ್ಲಿ ಪರಿಚಯವಾದ ಸಾಗರದ ಗಂಗಾಧರ್ ಎಂಬಾತನನ್ನು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದಳು.
ಶನಿವಾರ ಗಂಗಾಧರ್ ಪತ್ನಿಯ ಸಂಬಂಧಿಕರ ಕಾರ್ಯಕ್ರಮಕ್ಕೆ ಪತ್ನಿಯೊಂದಿಗೆ ಬಂದು ಶನಿವಾರ ರಾತ್ರಿ ಬೆಂಗಳೂರಿಗೆ KSRTC ಬಸ್ನಲ್ಲಿ ನಿಲ್ದಾಣದಿಂದ ತೆರಳುತ್ತಿದ್ದರು. ಈ ವೇಳೆ ಪ್ರೀತಮ್ ಕೂಡ ಬಸ್ ಹತ್ತಿದ್ದು, ಏಕಾಏಕಿ ಗಂಗಾಧರ್ನೊಂದಿಗೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ಹೋಗಿದೆ. ಪ್ರೀತಮ್ ಚೂರಿ ತೆಗೆದು, ಗಂಗಾಧರ್ನ ಹೃದಯ ಭಾಗಕ್ಕೆ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ಗಂಗಾಧರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯ ಬಳಿಕ ಮೃತದೇಹವನ್ನು ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾಧರನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
MLA Harris ತಡರಾತ್ರಿ ಶಾಸಕ ಎನ್.ಎ. ಹ್ಯಾರಿಸ್ ಬಲಗೈ ಬಂಟನ ಬರ್ಬರ ಹತ್ಯೆ
Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ
chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ