newsics.com
ಬೆಂಗಳೂರು : ಕನ್ನಡ ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮಹಾ ಪ್ರಯೋಗ ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡೋಕೆ ಸಜ್ಜಾದ ಕನ್ನಡದ ಧಾರಾವಾಹಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದ ಸೀತಾರಾಮ ತಂಡ ಸಖತ್ ಸುದ್ದಿಯಲ್ಲಿದೆ.
ವಿಶೇಷ ಪ್ರಯೋಗವನ್ನು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ಸೀತಾ ರಾಮ ಧಾರಾವಾಹಿ ತಂಡ ಮಾಡಿದೆ.ತ್ರಿವೇಣಿ ಸಂಗಮದಲ್ಲಿ ಮೂರು ಜನ ಪುಣ್ಯ ಸ್ನಾನ ಮಾಡಿದ್ದಾರೆ. ಸದ್ಯ ಸೀತಾರಾಮ ಧಾರಾವಾಹಿಯ ಹೊಸ ಪ್ರೋಮೋ ಬಿಡುಗಡೆಯಾಗಿದ್ದು, ಇದರಲ್ಲಿ ಕುಂಭಮೇಳದಲ್ಲಿ ಸೀತಾ, ರಾಮ, ಸುಬ್ಬಿ ಭಾಗಿಯಾಗಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರೋ ಮಹಾ ಕುಂಭಮೇಳದಲ್ಲಿ ಕನ್ನಡದ ಸೀತಾರಾಮ ಸೀರಿಯಲ್ ಭಾಗಿಯಾಗಿದೆ. ಈಗಾಗಲೇ ಮಹಾ ಕುಂಭಮೇಳಕ್ಕೆ ದೇಶ ವಿದೇಶಗಳಿಂದ ಭಕ್ತರು ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ.