newsics.com
ಬೆಂಗಳೂರು : ಪ್ರಯಾಗ್ರಾಜ್ಗೆ ತೆರಳಿದ್ದ ರಾಜ್ಯದ ಇಬ್ಬರು ಯಾತ್ರಿಗಳು ಗುಜರಾತ್ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ವಿಜಯಪುರ (Vijayapura) ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55), ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ವಾಹನದಲ್ಲಿ ಒಟ್ಟು 17 ಜನ ಪ್ರಯಾಗ್ರಾಜ್ಗೆ ತೆರಳುತ್ತಿದ್ದರು.
ಯಾತ್ರಾರ್ಥಿಗಳಿದ್ದ ವಾಹನ ಮಾರ್ಗ ಮಧ್ಯೆ ನಿಂತಿದ್ದ ಟಿಪ್ಪರ್ಗೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪೋರಬಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಭಮೇಳದಿಂದ ಹಿಂದಿರುಗುವಾಗ ಅಪಘಾತ ಸಂಭವಿಸಿ ಬೀದರ್ನ ಇಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ವರ್ದಾ ಬಳಿ ಟಿಟಿ ಮತ್ತು ಲಾರಿ ನಡುವೆ ಡಿಕ್ಕಿ ಅಪಘಾತ ಸಂಭವಿಸಿದೆ. ಮೃತರು ಬೀದರ್ನ ಓಲ್ಡ್ ಸಿಟಿಯ ದರ್ಜಿಗಲ್ಲಿಯವರು ಎಂದು ತಿಳಿದುಬಂದಿದೆ. ಟಿಟಿಯಲ್ಲಿದ್ದ ಇನ್ನುಳಿದ 14 ಜನರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.