newsics.com
ಬೆಂಗಳೂರು: ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾತಿ ಪಡೆಯಲು ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆ ಪೋಷಕರ ಅತಮಕ ಹೆಚ್ಚಿಸಿದೆ.
ಸರ್ಕಾರದ ಈ ನಿರ್ಧಾರದಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಕ್ಕಳು ಒಂದನೇ ತರಗತಿಗೆ ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಭಾರೀ ಅಕ್ರೊಶ ವ್ಯಕ್ತಪಡಿಸಿರುವ ಪೋಷಕರು, ಸರ್ಕಾರ ಈ ನಿಯಮ ಸಡಿಲಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೋಷಕರ ಸಮೂಹ, ಈಗಾಗಲೇ ಲಕ್ಷಾಂತರ ಮಕ್ಕಳು ಯುಕೆಜಿ ತೇರ್ಗಡೆ ಹೊಂದುತ್ತಿದ್ದು, 6 ವರ್ಷ ತುಂಬಲು 10 ದಿನಗಳಷ್ಟೇ ಬಾಕಿ ಇದೆ. ಸರ್ಕಾರದ ಈ ಸುತ್ತೋಲೆಯ ಪರಿಣಾಮ ಇವರೆಲ್ಲ ಒಂದನೇ ತರಗತಿಗೆ ಪ್ರವೇಶ ಸಿಗದೆ ಶೈಕ್ಷಣಿಕ ಸಮಯ ವ್ಯರ್ಥ ಮಾಡಿಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹೀಗಾಗಿ ಸರ್ಕಾರ ಈ ನಿಯಮ ಇದೊಂದು ಬಾರಿ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಕರಣ ನ್ಯಾಯಾಲಯ ಹಂತದಲ್ಲಿದೆ. ಪೋಷಕರು ಹಾಗೂ ಮಕ್ಕಳ ಮನವಿ ಬಗ್ಗೆ ನನಗೂ ಸಹಾನುಭೂತಿ ಇದೆ. ಮುಂದಿನ ದಿನಗಳಲ್ಲಿ ಕೋರ್ಟ್ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಒಂದನೇ ತರಗತಿಗೆ ಪ್ರವೇಶ ಪಡೆದುಕೊಳ್ಳುವ ವಿಚಾರ ಪೋಷಕರು ಹಾಗೂ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆಯುವ ಸಾಧ್ಯತೆಯಿದೆ.
BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ
Himani Narwal ಸೂಟ್ಕೇಸ್ನಲ್ಲಿ ಪತ್ತೆಯಾಯ್ತು 22ರ ಹರೆಯದ ಕಾಂಗ್ರೆಸ್ ಕಾರ್ಯಕರ್ತೆಯ ಶವ