newsics.com
ನವದೆಹಲಿ/ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿನ ಬಣ ಬಡಿದಾಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆದರೆ ಬಣ ಬಡಿದಾಟದ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ದಿನ ಬೆಳಗಾದರೆ ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಬೆಂಕಿ ಉಗುಳುತ್ತಿದ್ದ ಶಾಸಕ ಯತ್ನಾಳ್ ಇದೀಗ ಮೌನಕ್ಕೆ ಶರಣಾಗಿದ್ದಾರೆ.ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ಗೆ ಪ್ರತ್ಯುತ್ತರ ನೀಡಿದ ಬಳಿಕ ಯತ್ನಾಳ್ ಮೌನಕ್ಕೆ ಶರಣಾಗಿದ್ದಾರೆ. ಸದ್ಯಕ್ಕೆ ಮಾತು ಬೆಳೆಸುವುದು ಬೇಡ ಎಂಬ ತೀರ್ಮಾನಕ್ಕೆ ಅವರು ಬಂದ ಹಾಗಿದೆ.ಮೌನದ ಮೊರೆ ಹೋಗುವಂತೆ ಯತ್ನಾಳ್ಗೆ
ಆರ್ಎಸ್ಎಸ್ ವರಿಷ್ಟರು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಗೌರವ ಕೊಟ್ಟಿರುವ ಯತ್ನಾಳ್ ನೇರ ಪ್ರತಿಕ್ರಿಯೆಯಿಂದ ಹಿಂದೆ ಸರಿದಿದ್ದಾರೆ.
ಯತ್ನಾಳ್ ಕಾರ್ಯತಂತ್ರ
ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈ ಹಿಂದೆ ಘೋಷಿಸಿದ್ದ ಯತ್ನಾಳ್ ಇತ್ತೀಚೆಗೆ ತಮ್ಮ ನಿಲುವು ಬದಲಾಯಿಸಿದ್ದಾರೆ.ಬಹುತೇಕವಾಗಿ ಚುನಾವಣೆಯಿಂದ
ಹಿಂದೆ ಸರಿಯುವ ಮುನ್ಸೂಚನೆ ನೀಡಿದ್ದಾರೆ. ಬಿಜೆಪಿಯ ತಟಸ್ಥ ಬಣದಿಂದ ಬೆಂಬಲ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಯತ್ನಾಳ್ ತಮ್ಮ ನಿಲುವು ಬದಲಾಯಿಸಿದ್ದಾರೆ ಎಂದು
ವಿಶ್ಲೇಷಿಸಲಾಗುತ್ತಿದೆ. ಯತ್ನಾಳ್ ಈ ಸೂಚನೆ ನೀಡಿದ್ದರೂ ಕುಮಾರ್ ಬಂಗಾರಪ್ಪ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಚುನಾವಣೆಯಲ್ಲಿ ವಿಜಯೇಂದ್ರ ವಿರೋಧಿ ಬಣ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.ಕುಮಾರ್ ಬಂಗಾರಪ್ಪ ಹೇಳಿಕೆಗೆ ಯತ್ನಾಳ್ ಸೇರಿದಂತೆ ಇತರ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯದಲ್ಲಿ ಬಿಜೆಪಿ ಸಾಂಸ್ಥಿಕ ಚುನಾವಣೆಯ ಉಸ್ತುವಾರಿ ವಹಿಸಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ರಾಜ್ಯ ಭೇಟಿ ದಿನಾಂಕ ಇದುವರೆಗೂ ಅಂತಿಮಗೊಂಡಿಲ್ಲ.
ವಿಜಯೇಂದ್ರ ಪುನರಾಯ್ಕೆ ಸಾಧ್ಯತೆ
ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದರೂ ಬಿಜೆಪಿ ವರಿಷ್ಟರು ವಿಜಯೇಂದ್ರ ಬೆನ್ನಿಗೆ ನಿಂತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಿರಿಯ
ನಾಯಕರು ಹಲವು ಸಂದರ್ಭಗಳಲ್ಲಿ ವಿಜಯೇಂದ್ರ ನಾಯಕತ್ವಕ್ಕೆ ಶಹಭಾಸ್ಗಿರಿ ಕೊಟ್ಟಿದ್ದರು. ಈಗಲೂ ಬಿಜೆಪಿ ವರಿಷ್ಠರು ವಿಜಯೇಂದ್ರಗೆ ಬೆಂಬಲ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ದಕ್ಷಿಣ
ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಜೆಪಿ ಹೆಚ್ಚು ಬಲಿಷ್ಠವಾಗಿದೆ. ಪಕ್ಷದ ಸಂಘಟನೆ ದುರ್ಬಲಗೊಳ್ಳಲು ಅವಕಾಶ ನೀಡಬಾರದು ಎಂಬ ನಿಲುವಿಗೆ ಬಿಜೆಪಿ ವರಿಷ್ಠರು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಪುನರಾಯ್ಕೆವಾಗುವ ಸಾಧ್ಯತೆ ಹೆಚ್ಚಾಗಿದೆ. ಇಲ್ಲಿ ಯಡಿಯೂರಪ್ಪ ಅವರ ಪ್ರಭಾವಳಿಯನ್ನು ಬಿಜೆಪಿ ವರಿಷ್ಟರು
ಗಣನೆಗೆ ತೆಗೆದುಕೊಂಡಂತಿದೆ.ಯಡಿಯೂರಪ್ಪ ವೀರಶೈವ ಸಮಾಜದ ಅತ್ಯುನ್ನತ ನಾಯಕರಾಗಿದ್ದಾರೆ. ಅವರನ್ನು ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಚುನಾವಣೆಯಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂಬ
ಕಾರಣಕ್ಕೆ ವಿಜಯೇಂದ್ರಗೆ ಮಣೆ ಹಾಕಲಾಗಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ.
Tatto ಜಾತ್ರೆಗಳಲ್ಲಿ ಟ್ಯಾಟೂ ಹಾಕಿಸಲೇಬೇಡಿ: ಟ್ರೆಂಡ್ ಗಳ ಹಿಂದೆ ಬಿದ್ದು ಗೋಳಾಡಬೇಡಿ
Youtuber arrest ಪ್ರಚಾರಕ್ಕಾಗಿ ರೈಲು ಪ್ರಯಾಣಿಕನ ಕೆನ್ನೆಗೆ ಬಾರಿಸಿದ್ದ ಯೂಟ್ಯೂಬರ್ ಬಂಧನ, ವಿಡಿಯೋ ನೋಡಿ