newsics.com
ತುಮಕೂರು: ಮಹಿಳೆಯೊಬ್ಬರು ಕೆಎಸ್ಆರ್ಟಿಸಿ ಬಸ್ ನಲ್ಲಿ ಎಲೆ ಅಡಿಕೆ ಎಂಜಲು ಉಗಿದ ಸಂಬಂಧ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಮಾರಾಮಾರಿಯಾಗಿರುವ ಘಟನೆ ತುಮಕೂರಿನ ಪಾವಗಡದಲ್ಲಿ ನಡೆದಿದೆ.
ಪಾವಗಡದಿಂದ ತುಮಕೂರು ಕಡೆಗೆ ಹೊರಟ್ಟಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿಗೆ ಹೋಗಬೇಕಿದ್ದ 6 ಜನ ಪ್ರಮಾಣಿಕರು ಕುಳಿತುಕೊಂಡಿದ್ದರು. ಆದ್ರೆ, ಈ ಬಸ್ ಬೆಂಗಳೂರಿಗೆ ಹೋಗಲ್ಲ ತುಮಕೂರಿಗೆ ಹೋಗುತ್ತೆ ಇಳಿಯಿರಿ ಎಂದು ಕಂಡಕ್ಟರ್ ಹೇಳಿದ್ದಾರೆ. ಇಳಿಯುವ ವೇಳೆ ಮಹಿಳೆ ಬಸ್ ಒಳಗೆ ಎಲೆ ಅಡಿಕೆ ಉಗಿದಿದ್ದಾಳೆ.
ಇದನ್ನು ಕಂಡ ಕಂಡಕ್ಟರ್ ಮಹಿಳೆಗೆ ಬೈದಿದ್ದಾನೆ. ಅಲ್ಲದೇ ಕ್ಲೀನ್ ಮಾಡುವಂತೆ ಮಹಿಳೆಗೆ ತಾಕೀತು ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದ ಗಲಾಟೆ ಶುರುವಾಗಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮಹಿಳೆ ಕಡೆಯವರು ಬಸ್ ನಿರ್ವಾಹಕ ಅನಿಲ್ ಕುಮಾರ್ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆ ಸಂಬಂಧ ಪಾವಗಡ ಕೆಎಸ್ಆರ್ಸಿ ಡಿಪೋ ಕಂಡಕ್ಟರ್ ಅನಿಲ್ ಕುಮಾರ್ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಇದೀಗ ಪಾವಗಡ ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.