newsics.com
ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ರನ್ಯಾ ರಾವ್ ಅಂತಿಂಥಾ ಕಳ್ಳಿಯಲ್ಲ.. ಈಕೆಯ ಪ್ಲ್ಯಾನ್ ಇದೀಗ ತನಿಖೆಯ ವೇಳೆ ಒಂದೊಂದಾಗಿಯೇ ಅನಾವರಣಗೊಳ್ಳುತ್ತಿದ್ದು, ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದಳು ಎಂಬ ಸ್ಪೋಟಕ ಅಂಶ ತನಿಖೆಯ ವೇಳೆ ಬಹಿರಂಗವಾಗಿದೆ.
ಡಿಆರ್ಐ ಅಧಿಕಾರಿಗಳು ತನಿಖೆ ವೇಳೆ ರನ್ಯಾ ರಾವ್, ದುಬೈನಿಂದ ತಂದ ಚಿನ್ನವನ್ನು ಹೇಗೆ ಸಾಗಿಸುತ್ತಿದ್ದಳು ಎಂಬ ಪ್ರಶ್ನೆಗೆ ಉತ್ತರ ಹುಡುಕಿದ್ದು ಆಕೆ ಈ ಕೆಲಸಕ್ಕೆ ಸರ್ಕಾರಿ ವಾಹನವನ್ನೇ ಬಳಸುತ್ತಿದ್ದಳು ಎಂಬ ವಿಚಾರವನ್ನು ಹೊರಗೆಡವಿದ್ದಾರೆ
ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಸರ್ಕಾರಿ ವಾಹನದಲ್ಲೇ ರನ್ಯಾ ರಾವ್ ಚಿನ್ನವನ್ನು ಸಾಗಿಸಿದ್ದಾರೆ ಎಂಬುದು ಪತ್ತೆಯಾಗಿದ್ದು ರನ್ಯಾ ರಾವ್ ಇದೇ ವಾಹನದಲ್ಲಿ ಹಲವು ಬಾರಿ ವಿಮಾನ ನಿಲ್ದಾಣಕ್ಕೆ ಓಡಾಡುತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಇನ್ನು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರೋಟೋಕಾಲ್ ಸಿಬ್ಬಂದಿಗೆ ಸಿಬಿಐ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡ ನೋಟಿಸ್ ಜಾರಿ ಮಾಡಿದೆ. ಬಸವರಾಜು, ಮಹಾಂತೇಶ್, ವೆಂಕಟರಾಜು ಎಂಬುವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಶನಿವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಅಧಿಕಾರಿಗಳಾದ ಗೌರವ್ ಗುಪ್ತಾ ಹಾಗೂ ವಂಶಿಕೃಷ್ಣರ ತಂಡ ಏರ್ಪೋರ್ಟ್ ಪ್ರೋಟೋಕಾಲ್ ನಿಯಮಗಳ ಕುರಿತು ಅಧ್ಯಯನ ಮಾಡಿದ್ದು, ಏರ್ಪೋರ್ಟ್ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದ್ದು ಪ್ರಕರಂದ ಇನ್ನಷ್ಟು ವಿಚಾರಗಳು ಹೊರಬರಬೇಕಿದೆ.