newsics.com
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊಘಲ್ ರಾಜ ಔರಂಗಜೇಬನ ಸಮಾಧಿಯನ್ನು ನಾಶಪಡಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.
ಈ ಘಟನೆಯಲ್ಲಿ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದ್ದು, ಕೆಲವೆಡೆ ಬೆಂಕಿ ಹಚ್ಚಲಾಗಿದೆ. ಇದರ ಪರಿಣಾಮವಾಗಿ ನಾಗ್ಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮವಹಿಸಿದ್ದಾರೆ.
ನಾಗ್ಪುರದ ಕೆಲವು ಪ್ರದೇಶಗಳಲ್ಲಿ ಬೆಂಕಿ ಹಚ್ಚಿದ ವರದಿಗಳು ಬಂದಿವೆ. ಮಹಲ್ ಪ್ರದೇಶದಲ್ಲಿ ಕಲ್ಲು ತೂರಾಟ ಮತ್ತು ಉದ್ವಿಗ್ನತೆಯ ನಂತರ ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ.
ಶಾಂತಿ ಕಾಪಾಡಲು ಸಹಕರಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಸೋಮವಾರದಂದು ನಾಗ್ಪುರದಲ್ಲಿ ಉದ್ವಿಗ್ನತೆ ತಾರಕಕ್ಕೇರಿತು. ಮೊಘಲ್ ರಾಜ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಸದಸ್ಯರು ಛತ್ರಪತಿ ಸಂಭಾಜಿನಗರದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಎರಡು ವಿರುದ್ಧ ಗುಂಪುಗಳು ಮುಖಾಮುಖಿಯಾದಾಗ ಗೊಂದಲ ಹೆಚ್ಚಾಯಿತು. ಕಲ್ಲು ತೂರಾಟದ ಘಟನೆಗಳಿಗೆ ಕಾರಣವಾಯಿತು.
ಚಿನ್ನ ಅಕ್ರಮ ಸಾಗಣೆ: ಗೌರವ್ ಗುಪ್ತಾ ತನಿಖಾ ಸಮಿತಿಯಿಂದ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ
ಬೋಳು ತಲೆಯಲ್ಲಿ ಕೂದಲು ಬೆಳೆಸಲು ಕೊಟ್ಟ ಎಣ್ಣೆಯಿಂದ 20 ಮಂದಿಗೆ ಕಣ್ಣಿನ ಸೋಂಕು, ಆಸ್ಪತ್ರೆಗೆ ದಾಖಲು
ಉಕ್ರೇನ್ ಮೇಲಿನ ರಷ್ಯಾ ಅಣುಬಾಂಬ್ ದಾಳಿ ತಡೆದದ್ದು ಮೋದಿ!: ಪೋಲೆಂಡ್ ಸಚಿವ ವ್ಲಾಡಿಸ್ಲಾವ್ ಅಚ್ಚರಿ ಹೇಳಿಕೆ