newsics.com
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಹಾಗೂ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿದ ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಡಿಆರ್ಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ನಟಿ ರನ್ಯಾ ಅವರ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ವಿಶೇಷ ತನಿಖಾ ತಂಡ ಪ್ರಶ್ನಿಸಿದೆ.
ಐಎಎಸ್ ಅಧಿಕಾರಿ ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡವು ನಡೆಸಿದ ವಿಚಾರಣೆಯಲ್ಲಿ, ಕಳ್ಳಸಾಗಣೆ ಕಾರ್ಯಾಚರಣೆಗೆ ಅನುಕೂಲವಾಗುವಂತೆ ರಾವ್ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಗಳ ಮೇಲೆ ಕೇಂದ್ರೀಕರಿಸಲಾಗಿದೆ. ತನಿಖೆಯ ಭಾಗವಾಗಿ ಅವರ ಹೇಳಿಕೆಯನ್ನು ದಾಖಲಿಸಲಾಗಿದೆ.
ತನಿಖೆ ಚುರುಕಾಗಿ ನಡೆಯುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ವರದಿಯನ್ನು ಸರಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಸರಕಾರವು ಈ ಹಿಂದೆ ಸಮಿತಿಗೆ ತನಿಖೆಯನ್ನು ಪೂರ್ಣಗೊಳಿಸಿ ಒಂದು ವಾರದೊಳಗೆ ತನ್ನ ತನಿಖಾ ವಿವರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ರಾವ್ ಅವರನ್ನು ಮಾರ್ಚ್ 15 ರಂದು