newsics.com
ಗದಗ: ಇಂದು ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿವೆ. ಈ ಸಂದರ್ಭದಲ್ಲಿ ಪರೀಕ್ಷೆ ದಿನವೇ ವಿದ್ಯಾರ್ಥಿನಿಯ ಅಜ್ಜಿ ಸಾವನ್ನಪ್ಪಿದ್ದು, ದುಖಃದಲ್ಲೇ ವಿದ್ಯಾರ್ಥಿನಿ ಪರೀಕ್ಷೆ ಬರೆದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.
ಡಂಬಳದ ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ಜಲಜಾಕ್ಷಿ ಕಿಲಾರಿ ವಿದ್ಯಾರ್ಥಿನಿ ಅಜ್ಜಿ ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಎಸ್ಎಸ್ಎಲ್ಸಿ ಕನ್ನಡ ವಿಷಯದ ಪರೀಕ್ಷೆ ಬರೆಯಲು ಸಿದ್ಧಳಾಗಿದ್ದ ವಿದ್ಯಾರ್ಥಿನಿಗೆ ಅಜ್ಜಿ ಸಾವು ದುಖಃ ತಂದಿದೆ.
ಪರೀಕ್ಷೆಗೆ ಬರೆಯಲು ಭಯದಲ್ಲಿದ್ದ ಜಲಜಾಕ್ಷಿಗೆ ಪಾಲಕರು, ಶಾಲೆಯ ಶಿಕ್ಷಕರು ಮತ್ತು ಅವಳ ಸಹಪಾಠಿಗಳು ಧೈರ್ಯ ತುಂಬಿದ್ದಾರೆ. ಶಿಕ್ಷಕಿ ಶ್ರೀಮತಿ ಎ.ಬಿ ಬೇವಿನಕಟ್ಟಿ, ಸಂಜುತ ಸಂಕಣ್ಣವರ್, ಶ್ರೀಮತಿ ಎಸ್ಎಂ ಹಂಚಿನಾಳ, ಬುದಪ್ಪ ಅಂಗಡಿ, ಎಸ್ಎಸ್ ತಿಮ್ಮಾಪುರ್, ಎಂಎಂ ಗೌಳೆರ ಎಲ್ಲ ಶಿಕ್ಷಕರು ವಿದ್ಯಾರ್ಥಿನಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮೃತ ಅಜ್ಜಿಗೆ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿ ಪುಷ್ಪ ಸಮರ್ಪಿಸಿ ಆಶೀರ್ವಾದ ಪಡೆದುಕೊಂಡು ಬಂದು ಎದೆಯಲ್ಲಿ ದುಃಖ ತುಂಬಿಕೊಂಡೇ ಧೈರ್ಯದಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ.