ಚಿಕ್ಕಬಳ್ಳಾಪುರ: ಪ್ರವಾಸಿ ತಾಣವಾದ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶಿಸಿದ್ದಾರೆ.
ನಂದಿಗಿರಿಧಾಮದ ರಸ್ತೆಗೆ ಡಾಂಬರೀಕರಣ ಮಾಡುವ ಸಲುವಾಗಿ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೆ ಮುಂಜಾಗ್ರತಾ ಕ್ರಮವಾಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ .
ಆದರೆ ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 08 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
7 ಮುಕ್ಕಾಲು ಕಿಲೋಮೀಟರ್ ದೂರದ ಅಂಕುಡೊಂಕಿನ ರಸ್ತೆಗೆ ಅಲ್ಲಲ್ಲಿ ಹಾಳಾಗಿದೆ. ಹೀಗಾಗಿ ರಸ್ತೆಗೆ ಸಂಪೂರ್ಣವಾಗಿ ಮರು ಡಾಂಬರೀಕರಣ ಮಾಡಬೇಕಾಗಿದೆ. ಆದ್ದರಿಂದ ವಾರದಲ್ಲಿ 5 ದಿನಗಳ ಕಾಲ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ ಹಾಗೂ ಶುಕ್ರವಾರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.