newsics.com
ಉತ್ತರ ಪ್ರದೇಶ: ಮದುವೆಯಾದ ಎರಡು ವಾರಕ್ಕೆ ತನ್ನ ಗಂಡನನ್ನು ಕೊಲೆ ಮಾಡಲು ಹೆಂಡತಿಯೇ ಸುಪಾರಿ ಕೊಟ್ಟ ಘಟನೆ ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದಿದೆ.
ಆರೋಪಿಗಳನ್ನು ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಪತ್ನಿ ಪ್ರಗತಿ ಯಾದವ್(22) ಹಾಗೂ ಆಕೆಯ ಗೆಳೆಯ ಅನುರಾಗ್ ಯಾದವ್ ಸೇರಿ ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಘಟನೆ
ಮಾಹಿತಿ ಪ್ರಕಾರ, ಗಂಡನ ಕೊಲೆಗೆ ಸುಪಾರಿ ಕೊಟ್ಟ ಮಹಿಳೆ ಮತ್ತು ಅನುರಾಗ್ ಯಾದವ್ ಎಂಬಾತ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದರು. ಆದರೆ ಅವರ ಪೋಷಕರು ಇವರ ಸಂಬಂಧವನ್ನು ಒಪ್ಪಲಿಲ್ಲ. ಅಲ್ಲದೇ ಮಗಳನ್ನು ಬೇರೆಯವರಿಗೆ ಕೊಟ್ಟು ಮದುವೆ ಮಾಡಬೇಕೆಂದು ನಿರ್ಧರಿಸಿದರು. ಮಗಳು ಎಷ್ಟೇ ಬೇಡ ಎಂದರು ಬಲವಂತವಾಗಿ ಮಾರ್ಚ್ 5 ರಂದು ಆಕೆಯನ್ನು ದಿಲೀಪ್ ಎಂಬಾತನ ಜೊತೆ ಬಲವಂತವಾಗಿ ಮದುವೆ ಮಾಡಿಕೊಟ್ಟಿದ್ದಾರೆ.
ಹೀಗಾಗಿ ಬಲವಂತದ ಮದುವೆಯಿಂದ ಕೆರಳಿದ ಆಕೆ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನ ಕಥೆಯನ್ನೇ ಮುಗಿಸಲು ಪ್ಲಾನ್ ಮಾಡಿದ್ದಾಳೆ. ಇದರಿಂದ ಕೊಲೆ ಮಾಡಲು ಬೇರೆಯವರಿಗೆ ಸುಪಾರಿ ಕೊಟ್ಟು ತಾವು ಸೇಫ್ ಆಗಿ ಇರಬಹುದು ಎಂದು ಯೋಜನೆ ರೂಪಿಸಿದ್ದಾರೆ
ಕೇವಲ ಎರಡು ವಾರದಲ್ಲಿ ಅಂದರೆ ಮಾರ್ಚ್ 19 ರಂದು ದಿಲೀಪ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ದಿಲೀಪ್ ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಬಿದುನಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 21 ರಂದು ದಿಲೀಪ್ ಕೊನೆಯುಸಿರೆಳೆದಿದ್ದಾನೆ.
ದಿಲೀಪ್ ಸಾವಿನ ಬಗ್ಗೆ ಸಹೋದರ ಸಹಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರಿಂದ ಪೊಲೀಸರು ವಿಚಾರಣೆಗಿಳಿದಾಗ ಸತ್ಯ ಹೊರಬಂದಿದೆ. ತನಿಖೆಯ ಸಮಯದಲ್ಲಿ, ದಿಲೀಪ್ನ ಪತ್ನಿ ಮತ್ತು ಆಕೆಯ ಪ್ರೇಮಿ ಮದುವೆಯ ನಂತರ ಭೇಟಿಯಾಗಲು ಸಾಧ್ಯವಾಗಿರಲಿಲ್ಲವಂತೆ. ಇದೇ ಕಾರಣಕ್ಕೆ ಅವರು ಪತಿಯನ್ನು ಕೊಲ್ಲಲು ನಿರ್ಧರಿಸಿದ್ದಾಗಿ ತಿಳಿದುಬಂದಿದೆ. ನಂತರ ಇಬ್ಬರೂ ಸೇರಿ ಪ್ಲಾನ್ ಮಾಡಿ ದಿಲೀಪ್ ನನ್ನು ಕೊಲೆ ಮಾಡಲು ರಾಮಾಜಿ ಚೌಧರಿ ಎಂಬಾತನಿಗೆ ಸುಪಾರಿ ಕೊಟ್ಟಿದ್ದಾರೆ. ಅಲ್ಲದೇ ಕೊಲೆ ಮಾಡಲು ಅವನಿಗೆ 2 ಲಕ್ಷ ರೂ.ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಪ್ರಗತಿ, ಪ್ರಿಯಕರ ಅನುರಾಗ್ ಸೇರಿದಂತೆ ಸುಪಾರಿ ಹಂತಕರನ್ನು ಬಂಧಿಸಿದ್ದಾರೆ.
Viral video: 30ರ ಯುವತಿಯನ್ನ ಮದುವೆಯಾದ 70ರ ಅಜ್ಜ!: ವೈರಲ್ ವಿಡಿಯೋ ನೋಡಿ