newsics.com
ಬೆಂಗಳೂರು: ಪಾಪಿ ಪತಿ ತನ್ನ ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ಗೆ ತುಂಬಿಸಿದ ಘೋರ ಘಟನೆ ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ನಡೆದಿದ.
ಕೃತ್ಯ ಎಸಗಿದ ಬಳಿಕ ಪತಿ ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಗೌರಿ ಮನೆಯವರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ವಿಷಯ ಹೇಳಿದ್ದಾರೆ.
ರಾಕೇಶ್, ಗೌರಿ ಅನಿಲ್ ಸಾಂಬೆಕರ್ ಮಧ್ಯೆ ಜಗಳವಾಗಿ ಪತ್ನಿಯನ್ನು ರಾಕೇಶ್ ತುಂಡು, ತುಂಡಾಗಿ ಕತ್ತರಿಸಿದ್ದಾನೆ. ಹುಳಿಮಾವು ಪೊಲೀಸರು ದೊಡ್ಡ ಕಮ್ಮನಹಳ್ಳಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.