newsics.com
ಬೆಳಗಾವಿ: ಸೈಬರ್ ಕಿರಾತಕರ ಕಿರುಕುಳಕ್ಕೆ ಹೆದರಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83) ಹಾಗೂ ಪಾವಿಯಾ ನಜರತ್ (79) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ತಿಳಿದು ಬಂದಿದೆ.
ಸ್ವಸಹಾಯ ಸಂಘದ ಮಹಿಳೆ ವೃದ್ಧ ದಂಪತಿ ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೈಬರ್ ವಂಚಕರು ಕೆಲ ದಿನಗಳ ಹಿಂದೆ ವೃದ್ಧ ಡಿಯಾಂಗೋಗೆ ವಿಡಿಯೋ ಕಾಲ್ ಮಾಡಿ ನಿಮ್ಮ ಫೋಟೊಗಳನ್ನ ಬಳಿಸಿಕೊಂಡು ಯಾರೋ ಸೈಬರ್ ವಂಚನೆ ಮಾಡಿದ್ದು ನಿಮ್ಮ ಮೇಲೆ ಕೇಸ್ ಆಗಿದೆ ಎಂದು ಹೇಳಿ ಹೆದರಿಸಿದ್ದಾರೆ. ಬಳಿಕ ತಮ್ಮ ಮೇಲಾಧಿಕಾರಿಗಳು ಮಾತಾಡ್ತಾರೆ ಎಂದು ಕರೆಯನ್ನ ಬೇರೆಯವರಿಗೆ ಟ್ರಾನ್ಸ್ಪರ್ ಮಾಡಿದ್ದು, ಅವರು ಕೂಡ ಆರಂಭದಲ್ಲಿ ಇವರಿಗೆ ಹೆದರಿಸಿದ್ದಾರೆ.
ವಂಚನೆಯಾದ ಹಣವನ್ನ ನೀವು ಕಟ್ಟಿದ್ರೇ ನಿಮ್ಮನ್ನ ನಾವು ಸೇಪ್ ಮಾಡುತ್ತೇವೆ ಎಂದು ಹೇಳಿ ಆರಂಭದಲ್ಲಿ ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಒಂದು ಬ್ಯಾಂಕ್ ಅಕೌಂಟ್ ನಂಬರ್ ನೀಡಿ ಅದಕ್ಕೆ ಆರ್ ಟಿ ಜಿಎಸ್ ಮಾಡಿಸಿಕೊಂಡಿದ್ದಾರೆ. ಹೀಗೆ ಸುಮಾರು ಬಾರಿ ಕರೆ ಮಾಡಿ ಹೆದರಿಸಿ ಸುಮಾರು 50 ಲಕ್ಷ ರೂ. ವರೆಗೂ ಹಣವನ್ನ ಹಾಕಿಸಿಕೊಂಡಿದ್ದಾರೆ. ಗೋಲ್ಡ್ ಅಡವಿಟ್ಟು ಏಳು ಲಕ್ಷ, ನಿವೃತ್ತಿಯಾದಾಗ ಬಂದಿದ್ದ ಸುಮಾರು ನಲವತ್ತು ಲಕ್ಷ ಸೇರಿ ಐವತ್ತು ಲಕ್ಷ ಹಣವನ್ನ ಸೈಬರ್ ವಂಚಕರು ಹೇಳಿದ ಹಾಗೇ ಹಾಕುತ್ತಾ ಹೋಗಿದ್ದಾರೆ. ಇದಾದ ಬಳಿಕ ಮೊನ್ನೆ ಖುದ್ದು ಡಿಯಾಂಗೋ ಕರೆ ಬಂದ ನಂಬರ್ ಗೆ ಕಾಲ್ ಮಾಡಿದ್ದಾರೆ/ ಆದ್ರೆ, ಅವರು ರಿಸೀವ್ ಮಾಡದಿದ್ದಾಗ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಸೇಜ್ ಹಾಕಿದ್ದಾರೆ. ಆದರೂ ರಿಪ್ಲೈ ಬಾರದಿದ್ದಾಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ, ಬಿಮ್ಸ್ನಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ