newsics.com
ಲಕ್ನೋ: ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದಿದೆ.
ಹತ್ಯೆಗೀಡಾದ ಅಧಿಕಾರಿಯನ್ನು ಎಸ್ಎನ್ ಮಿಶ್ರಾ (51) ಎಂದು ತಿಳಿದು ಬಂದಿದೆ. ಪ್ರಯಾಗ್ರಾಜ್ನ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಮಲಗಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯ ಮೂಲಕ ಗುಂಡು ಹಾರಿಸಿದ್ದಾನೆ.
ಗುಂಡು ಅವರ ಎದೆಗೆ ತಗುಲಿತ್ತು. ಅವರನ್ನು ತಕ್ಷಣ ಸೇನಾ ಆಸ್ಪತ್ರೆಗೆ ಸಾಗಿಸಿದರು, ವೈದ್ಯರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.
https://www.newsics.com/2025/03/29/passenger-who-smoked-beedi-on-a-plane/