Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBMP budget ಮೊದಲ ಬಾರಿಗೆ ದೊಡ್ಡ ಬಜೆಟ್ ಮಂಡನೆ ಮಾಡಿದ ಬಿಬಿಎಂಪಿ: ಬ್ರ್ಯಾಂಡ್ ಬೆಂಗಳೂರಿಗೆ ಭರಪೂರ ಗಿಫ್ಟ್
ಕರ್ನಾಟಕಪ್ರಮುಖ

BBMP budget ಮೊದಲ ಬಾರಿಗೆ ದೊಡ್ಡ ಬಜೆಟ್ ಮಂಡನೆ ಮಾಡಿದ ಬಿಬಿಎಂಪಿ: ಬ್ರ್ಯಾಂಡ್ ಬೆಂಗಳೂರಿಗೆ ಭರಪೂರ ಗಿಫ್ಟ್

Share
2 Min Read
SHARE

newsics.com

ಬೆಂಗಳೂರು : ಇಂದು ಬಿಬಿಎಂಪಿ 2025 – 26 ನೇ ಸಾಲಿನ ಬಜೆಟ್‌ನ್ನು ಮಂಡನೆ ಮಾಡಲಾಯಿತು. ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಿದ್ದು ವಿಶೇಷ.
ಬಿಬಿಎಂಪಿ ಇತಿಹಾಸದಲ್ಲೇ ಅತಿ ಹೆಚ್ಚಿನ ಗಾತ್ರದ ಬಜೆಟ್ ಮಂಡನೆ‌ ಇದಾಗಿದೆ. ಇದೇ ಮೊದಲನೇ ಬಾರಿಗೆ 19 ಸಾವಿರದ 927 ಸಾವಿರ ಕೋಟಿ ಬಜೆಟ್ ಮಂಡನೆ ಮಾಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್ ಅವರು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ.
ಬೆಂಗಳೂರಿನ ಹಸಿರು ಹೊದಿಕೆಯನ್ನು ಹೆಚ್ಚಿಸುವತ್ತ ಹೆಚ್ಚಿನ ಒತ್ತು ನೀಡಲಾಗಿದೆ. ರಸ್ತೆಗಳ ಇಕ್ಕೆಲದಲ್ಲಿ, ಸರ್ಕಾರಿ ತೆರೆದ ಭೂಮಿ, ಕೆರೆಗಳು ಮತ್ತು ಉದ್ಯಾನವನಗಳಲ್ಲಿ ಸಸಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೆಡುವ ಬಗ್ಗೆ ವಿಶೇಷ ಒತ್ತು ನೀಡಲಾಗಿದೆ.
ಬ್ರ್ಯಾಂಡ್‌ ಬೆಂಗಳೂರಿಗೆ ಬಿಬಿಎಂಪಿ ಬಜೆಟ್‌ನಲ್ಲಿ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ ಟ್ರಾಫಿಕ್ ಮುಕ್ತ, ಗ್ರೀನ್ ಸಿಟಿ, ಟೆಕ್, ಶಿಕ್ಷಣ, ಆರೋಗ್ಯ, ರೋಮಾಂಚಕ ಬೆಂಗಳೂರು,ನೀರಿನ ಭದ್ರತೆಗೆ ಅತಿ ಹೆಚ್ಚಿನ ಒತ್ತು ನೀಡಲಾಗಿದೆ. ಬ್ರ್ಯಾಂಡ್‌ ಬೆಂಗಳೂರಿಗೆ 1,790 ಕೋಟಿ ವೆಚ್ಚ ಮಾಡಲು ನಿರ್ಧಾರ ಮಾಡಲಾಗಿದೆ.

ಇ- ಖಾತಾದಿಂದ ಅತಿಹೆಚ್ಚಿನ ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ. ಹೊಸ ಜಾಹೀರಾತು ನೀತಿಯಿಂದ 750 ಕೋಟಿ ನಿರೀಕ್ಷೆ ಮಾಡಲಾಗಿದ್ದು, ನಗರ ಯೋಜನೆಯಿಂದ 2 ಸಾವಿರ ಕೋಟಿ ಸಂಗ್ರಹದ ನಿರೀಕ್ಷೆ ಇದೆ. ಇದರ ಜೊತೆಗೆ 5,716 ಕೋಟಿ ಕಂದಾಯ ನಿರೀಕ್ಷೆ ಮಾಡಲಾಗಿದೆ.

ಪಾಲಿಕೆ ವ್ಯಾಪ್ತಿಯ 20 ಲಕ್ಷ ಸ್ವತ್ತುಗಳ ಸರ್ವೇಗೆ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುತ್ತಿದ್ದು, ಪಾಲಿಕೆಯ ಗುತ್ತಿಗೆ ಅವಧಿ ಮುಗಿದ 143 ಆಸ್ತಿಗಳನ್ನ ಹರಾಜು ಮೂಲಕ ಗುತ್ತಿಗೆ ನೀಡಲು ಪ್ಲಾನ್ ರೂಪಿಸಲಾಗಿದೆ. ಅಲ್ಲದೆ ಜಾಹೀರಾತು ನೀತಿಯಿಂದ ಪಾಲಿಕೆ ಆದಾಯ ಏರಿಕೆ ಪ್ಲಾನ್ ಸಹ ಇದೆ. ಅನಧಿಕೃತ ಜಾಹೀರಾತಿಗೆ ಬ್ರೇಕ್ ಹಾಕಲು ಹೊಸ ನಿಯಮ ಜಾರಿ ಇದರಿಂದ 750 ಕೋಟಿ ಆದಾಯ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ನಂಬಿಕೆ ನಕ್ಷೆ ಹೆಸರಲ್ಲಿ ಆನ್ ಲೈನ್ ಖಾತಾ ನೋಂದಣೆಗೆ ಪ್ಲಾನ್ ಮಾಡಲಾಗಿದೆ. ಮನೆ ಮುಂದೆ ವಾಹನಗಳ ಪಾರ್ಕಿಂಗ್ ಕಡಿವಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಮೆಕಾನಿಕಲ್ ಕಾರ್ ಪಾರ್ಕಿಂಗ್‌ಗೆ ಅವಕಾಶ ನೀಡಲಾಗುತ್ತದೆ. ಈ ನಡುವೆ ಪೌರಕಾರ್ಮಿಕರನ್ನು ಖಾಯಂ ಗೊಳಿಸಲಾಗುತ್ತಿದ್ದು, ಸದರಿ ವೇತನ ಮತ್ತು ಭತ್ಯೆಗಳಿಗಾಗಿ 500 ರೂ‌ ಕೋಟಿ ಮೀಸಲು ಇಡಲಾಗಿದೆ.

ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಎಲೆಕ್ಟ್ರಿಕ್ ಆಟೋಗಳ ಖರೀದಿ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಹಿಂದುಳಿದ, ಅಲ್ಪಸಂಖ್ಯಾತರು ಮತ್ತು ತೃತೀಯ ಲಿಂಗಿ ಸಮುದಾಯದ ಅರ್ಹ ಫಲಾನುಭವಿಗಳಿಗೆ 500 ಎಲೆಕ್ಟ್ರಿಕ್ ಸಾರಿಗೆ ಆಟೋಗಳು/ ಸರಕು ಇ ಆಟೋಗಳ ಖರೀದಿ, ಇದಕ್ಕಾಗಿ 10 ಕೋಟಿ ಮೀಸಲು ಇಡಲಾಗುತ್ತದೆ.

1 ಸಾವಿರ ಉದ್ಯೋಗಸ್ಥ ಮಹಿಳೆಯರು ಮತ್ತು ಪೌರಕಾರ್ಮಿಕರಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳು ಮತ್ತು ವಿಶೇಷ ಚೇತನರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳು 15 ಕೋಟಿ ಮೀಸಲಿಡಲಾಗಿದೆ. ಇದರ ಜೊತೆವೆ ಸುಗಮ ಸಂಚಾರಕ್ಕೆ 880 ಕೋಟಿ ವೆಚ್ಚ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುರಂಗ ಮಾರ್ಗಕ್ಕೆ 42,000 ಕೋಟಿ ವ್ಯಯ ಮಾಡಲು ನಿರ್ಧಾರ ಮಾಡಲಾಗಿದ್ದು, ಎಲಿವೇಟೆಡ್ ಕಾರಡಾರ್ ಗ್ರೇಟ್ ಸಪರೇಟ್ ನಿರ್ಮಾಣ ಕ್ಕೆ ಅಂದಾಜು 13, 200 ಕೋಟಿ ವ್ಯಯ ಆಗಲಿದೆ ಹಾಗೂ ಡಬ್ಬಲ್ ಡೆಕ್ಕರ್ ನಿರ್ಮಾಣಕ್ಕೆ 9, 000 ಕೋಟಿ, ಉತ್ತಮ ಸಂಪರ್ಕಕ್ಕಾಗಿ ರಾಜಕಾಲುವೆ ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ 3,000 ಕೋಟಿ, ರಸ್ತೆಗಳ ವೈಟ್ ಟಾಪಿಂಗ್‌ಗೆ 6,000 ಕೋಟಿ ವಿನಿಯೋಗಿಸಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ.

Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು

TAGGED:BBMP presents a big budget for the first time: A huge gift to Brand Bangalore
Share This Article
Facebook Twitter Copy Link Print
Previous Article Accidnet ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವು, ಐವರಿಗೆ ಗಾಯ
Next Article ಕಸದ ಲಾರಿಗೆ ಬೈಕ್ ಡಿಕ್ಕಿ: 10 ವರ್ಷದ ಬಾಲಕ ಸಾವು

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?