newsics.com
ಬೀದರ್: ತಂಗಿಯನ್ನ ಪ್ರೀತಿಸಿದ ಎಂಬ ಕಾರಣಕ್ಕೆ ಯುವಕನನ್ನ ಸಹೋದರರು ಭೀಕರವಾಗಿ ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ.
ಪ್ರಶಾಂತ ಬಿರಾದರ್ (25) ಬರ್ಬರವಾಗಿ ಕೊಲೆಯಾದ ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ನಡುವೆ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು.
ಶುಕ್ರವಾರ ರಾತ್ರಿ ನಿರಗುಡಿ ಗ್ರಾಮದಲ್ಲಿ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದೆ. ಈ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಕೊಲೆ ಮಾಡಿದ್ದಾರೆ.
ಕೊಲೆ ಮಾಡಿದ ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಎಂಬ ಇಬ್ಬರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
https://www.newsics.com/2025/03/29/you-can-now-cancel-train-tickets-online/