newsics.com
ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ರೌಡಿಶೀಟರ್ ನ ಬರ್ಬರ ಕೊಲೆಯಾಗಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಕೊಲೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ.
ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಹವಾ ಮೇಂಟೇಂನ್ ಮಾಡ್ಕೊಂಡು ಓಡಾಡ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಮಣ್ತಿನ್ನೊ ಕೆಲಸ ಮಾಡುತ್ತಿದ್ದ ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಇದ್ದಿದ್ರಿಂದ ಸ್ನೇಹಿತರು ಕರೆದರೂ ಅಂತಾ ಕುಣಿಗಲ್ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡ್ತಿದ್ರಂತೆ. ಈ ವೇಳೆ 2 ಬೈಕ್ನಲ್ಲಿ ಎಂಟ್ರಿಕೊಟ್ಟಿದ್ದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಂದಿದ್ದಾರೆ.
ಮನೆಹಾಳ್ ಕೆಲಸ ಮಾಡಿ ಊರಲ್ಲಿ ಸೆಟಲ್ ಆಗಿದ್ದ ನೇಪಾಳಿ ಮಂಜ ಯುಗಾದಿ ದಿನವೇ ತನ್ನ ಅಡ್ಡಾದಲ್ಲಿ ಬೀದಿ ಹೆಣವಾಗಿದ್ದಾನೆ. ಕೊಲೆಗೆ ಬೇರೆ ಏನಾದರೂ ಕಾರಣ ಇದೆಯಾ ಅನ್ನೋದು ಪೊಲೀಸ್ ತನಿಖೆ ನಂತರ ಬಯಲಾಗಬೇಕಿದೆ.
Rain Alert ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ