newsics.com
ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಿದ್ದು, ರೂ. 13 ಕೋಟಿ ಮೌಲ್ಯದ 17 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ಟೋಬರ್ 24 ರಂದು ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ್ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಐದು ತಂಡಗಳು ಗ್ಯಾಂಗ್ ಪತ್ತೆಗಾಗಿ ಉತ್ತರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಕೊನೆಗೆ ಎಲ್ಲಾ ಆರು ಆರೋಪಿಗಳು ಸಿಕ್ಕಿ ಬಿದಿದ್ದಾರೆ.
ಆರೋಪಿಗಳು ಮೊಬೈಲ್ ವಾಹನ ಬಳಸದೇ, ಯಾವ ಸಾಕ್ಷಿಯನ್ನೂ ಬಿಡದೆ ದರೋಡೆ ಮಾಡಿದ್ದರು. ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್ ನಲ್ಲಿ ಇಟ್ಟಿದ್ದರು.
https://x.com/ANI/status/1906661174705594689
https://www.newsics.com/2025/03/31/fire-accident-at-cooler-manufacturing-factory/