newsics.com
ಬೆಂಗಳೂರು: ರೇಣುಕಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋ ರ್ಟ್ನಿಂದ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ಪ್ರಕರಣದಲ್ಲಿ ದರ್ಶನ್ ಸೇರಿ ಐವರು ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ.
ಕಳೆದ ವರ್ಷ ದರ್ಶನ್ ಸೇರಿ 17ಮಂದಿಗೆ ಜಾಮೀನು ಸಿಕ್ಕಿತ್ತು. ಈ ಪೈಕಿ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿದೆ.
2024ರ ಜೂ. 9ಕ್ಕೆ ರೇಣುಕಸ್ವಾಮಿ ಕೊ*ಲೆ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿತ್ತು. ಆರು ತಿಂಗಳ ಬಳಿಕ ದರ್ಶನ್ ಸೇರಿ 17 ಮಂದಿ ಜಾಮೀನು ಪಡೆದಿದ್ದರು. ಇದೀಗ ಇಂದು ಬೇಲ್ ಅರ್ಜಿಯ ವಿಚಾರಣೆ ನಡೆಯಲಿದ್ದು, ಒಂದು ವೇಳೆ ಜಾಮೀನು ರದ್ದಾದರೆ ನಟ ದರ್ಶನ್ ಮತ್ತೆ ಜೈಲು ಸೇರುವ ಸಾಧ್ಯತೆ ಇದೆ.
Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ