newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಮುಡಾ ಸಂಕಷ್ಟ ಎದುರಾಗಿದೆ.ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾ ವರದಿ ತಿರಸ್ಕರಿಸುವಂತೆ ಕೋರಿ ಇಡಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಒಟ್ಟು 8 ಪುಟಗಳ ತಕರಾರು ಅರ್ಜಿಯನ್ನು ಸಲ್ಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಾಗಿ ಲೋಕಾಯುಕ್ತ ವರದಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ ಎಂದು ತಿಳಿದುಬಂದಿದೆ.