newsics.com
ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿ ಎಚ್ಸಿಯದ ಸಮೀಪದಲ್ಲಿ ಬರೋಬ್ಬರಿ 400 ಎಕರೆ ಕಾಂಚ ಗಚಿಬೌಲಿ ಪ್ರದೇಶದ ಅರಣ್ಯದಲ್ಲಿ ರಾತ್ರೋ ರಾತ್ರಿ ಅರಣ್ಯ ನಾಶಕ್ಕೆ ತೆಲಂಗಾಣ ಸರ್ಕಾರವು ಮುಂದಾಗಿದೆ. ಮೂಕ ಪ್ರಾಣಿಗಳು ರೋಧನೆ ಮುಗಿಲು ಮುಟ್ಟಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇದಕ್ಕೆ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಜನರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಇದೀಗ ಪರಿಸರ ಪ್ರೇಮಿಗಳು, ವನ್ಯಜೀವಿ ಪ್ರಿಯರು ಹಾಗೂ ಜನ ಸಾಮಾನ್ಯರಿಂದ ಏಕಕಾಲಕ್ಕೆ ಆಕ್ರೋಶಕ್ಕೆ ಗುರಿಯಾಗಿದೆ.
ತೆಲಂಗಾಣ ಸರ್ಕಾರವು ಇಲ್ಲಿನ ಅರಣ್ಯ ಪ್ರದೇಶದಲ್ಲಿ ಮೂಲಸೌಕರ್ಯ ಹಾಗೂ ಐಟಿ ಪಾರ್ಕ್ಗಳ ಅಭಿವೃದ್ಧಿಗೆ ಮುಂದಾಗಿತ್ತು. ತೆಲಂಗಾಣ ಕೈಗಾರಿಕಾ ಮೂಲಸೌಕರ್ಯ ನಿಗಮ ಲಿ (ಟಿಜಿಐಐಸಿ)ಗೆ 400 ಎಕರೆ ಭೂಮಿ ಹಂಚಿಕೆ ಮಾಡಲಾಗಿತ್ತು. ಇದು ಈ ಭಾಗದಲ್ಲಿ ಅಲ್ಲೋಲ – ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ಇದೀಗ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ. ಈ ಭಾಗದಲ್ಲಿ ಭೂ ತೆರವು ಕಾರ್ಯಚರಣೆಯನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
https://www.instagram.com/reel/DH-aswkyrYk/?igsh=bmtxNXg4MGZwdTh2
https://www.newsics.com/2025/04/04/what-does-it-mean-if-a-lizard-falls-on-any-part-of-your-body/