newsics.com
ಮೈಸೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಭವಾನಿ ರೇವಣ್ಣ ಅವರು ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಭವಾನಿ ರೇವಣ್ಣಗೆ ನ್ಯಾಯಾಲದ ಸ್ವಲ್ಪ ರಿಲೀಫ್ ನೀಡಿದ್ದು ಹಾಸನ ಮತ್ತು ಮೈಸೂರಿಗೆ ತೆರಳಲು ಭವಾನಿ ರೇವಣ್ಣಗೆ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆದ್ರೆ ಸಂತ್ರಸ್ತೆ ಮತ್ತು ಕೇಸ್ ನ ಸಾಕ್ಷಿಗಳ ನಿವಾಸದ ಸುತ್ತ ಮುತ್ತ ಅರ್ಥ ಕಿಲೋಮೀಟರ್ ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ.
ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಈ ಮಧ್ಯ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿ ಹೈಕೋರ್ಟ್ ಏಕ ಸದಸ್ಯಪೀಠ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಈ ಹಿಂದೆ ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡುವ ವೇಳೆ ಹೈಕೋರ್ಟ್ ಷರತ್ತು ವಿಧಿಸಿತ್ತು.
ACTOR DARSHAN: ಶೂಟಿಂಗ್ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್ʼ ದರ್ಶನ್