newsics.com
ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇನ್ನು ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ನ್ಯಾಯಾಲಯ ಆದೇಶ ನೀಡಿದೆ.
ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಸಿದ ಬಗ್ಗೆ 2016ರಲ್ಲಿ ವಕೀಲ ಬಿ. ವಿನೋದ್ ಖಾಸಗಿ ದೂರು ಸಲ್ಲಿಸಿದ್ದರು. ಈಶ್ವರಪ್ಪ ಜನ ಸಂಪನ್ಮೂಲ ಸಚಿವರಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದಲ್ಲಿ ದೂರು ದಾಖಲಿಸಿದ್ದರು.
ಲೋಕಾಯುಕ್ತ ನ್ಯಾಯಾಲಯದಲ್ಲಿ ವಜಾಗೊಂಡಿದ್ದ ಈ ಪ್ರಕರಣವನ್ನು 2020 ರಲ್ಲಿ ಮತ್ತೆ ಮರು ಪರಿಗಣಿಸಿ ಹೈಕೋರ್ಟ್ ಆದೇಶ ನೀಡಿತ್ತು.ಈಗ ಈ ಪ್ರಕರಣದಲ್ಲಿ ಮೂರು ತಿಂಗಳಲ್ಲಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ.
Airport Luggage: ವಿಮಾನದಲ್ಲಿ ಹೋಗುವಾಗ ಈ ಕಲರ್ ಬ್ಯಾಗ್ ತರಬೇಡಿ: ತಂದ್ರೆ ಸಮಸ್ಯೆ ತಪ್ಪಿದಲ್ಲ