newsics.com
ನವದೆಹಲಿ: ಬಂದರುಗಳು ಮತ್ತು ವಿಮಾನ ನಿಲ್ದಾಣಗಳಿಗೆ ಹೋಗುವ ಮಾರ್ಗದಲ್ಲಿ ಭಾರತೀಯ ಭೂ ಕಸ್ಟಮ್ಸ್ ಕೇಂದ್ರಗಳನ್ನು ಬಳಸಿಕೊಂಡು ಬಾಂಗ್ಲಾದೇಶದಿಂದ ಮೂರನೇ ದೇಶಗಳಿಗೆ ಸರಕುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಟ್ರಾನ್ಸ್ಶಿಪ್ಮೆಂಟ್ ಸೌಲಭ್ಯವನ್ನು ಸರ್ಕಾರ ರದ್ದುಗೊಳಿಸಿದೆ.
ಭಾರತದ ಈಶಾನ್ಯ ರಾಜ್ಯಗಳ ಕುರಿತು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಇತ್ತೀಚೆಗೆ ಮಾಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರಂತೆ, ಭಾರತವು ಬಾಂಗ್ಲಾದೇಶಕ್ಕೆ ನೀಡಿದ್ದ ಟ್ರಾನ್ಸ್ಶಿಪ್ಮೆಂಟ್ ಸೌಲಭ್ಯವನ್ನು ಹಿಂತೆಗೆದುಕೊಂಡಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರವು ಏಪ್ರಿಲ್ 8, 2025 ರಿಂದ ಜಾರಿಗೆ ಬಂದಿದ್ದು, ಭಾರತೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಬಾಂಗ್ಲಾದೇಶಕ್ಕೆ ನೀಡಲಾಗಿದ್ದ ಈ ಸೌಲಭ್ಯವು ಹೆಚ್ಚುವರಿ ದಟ್ಟಣೆ, ಸಾಗಣೆ ವಿಳಂಬ ಮತ್ತು ಹೆಚ್ಚಿದ ವೆಚ್ಚಗಳಿಗೆ ಕಾರಣವಾಗುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಇದರ ಪರಿಣಾಮವಾಗಿ, ಭಾರತದ ಸ್ವಂತ ರಫ್ತುಗಳ ಮೇಲೂ ಪ್ರಭಾವ ಬೀರುತ್ತಿದೆ. ಆದರೆ, ಬಾಂಗ್ಲಾದೇಶದಿಂದ ನೇಪಾಳ ಮತ್ತು ಭೂತಾನ್ಗೆ ಭಾರತೀಯ ಪ್ರದೇಶದ ಮೂಲಕ ಸರಕುಗಳನ್ನು ಸಾಗಿಸಲು ಯಾವುದೇ ನಿರ್ಬಂಧಗಳಿಲ್ಲ.