newsics.com
ಶಿರಸಿ: ಬಿಸಿಲ ತಾಪಕ್ಕೆ ಪ್ರಾಣಿ, ಪಕ್ಷಿಗಳು ಕೂಡ ಕಂಗಾಲಾಗಿವೆ. ಇದರಿಂದ ತಂಪಾದ ಹಾಗೂ ನೆರಳು ಇರುವ ಜಾಗವನ್ನು ಸರಿಸೃಪಗಳು ಅರಸುತ್ತಿವೆ. ಹೀಗೆ ವ್ಯಕ್ತಿಯೊಬ್ಬರ ಪ್ಯಾಂಟ್ ಒಳಗೆ ಹಾವೊಂದು ಸೇರಿತ್ತು.
ಶಿರಸಿಯ ನಾರಾಯಣಗುರು ನಗರದಲ್ಲಿ ಮಾಂತೇಶ್ ಅವರು ತಮ್ಮ ಮನೆಯಲ್ಲಿ ಇಟ್ಟಿದ್ದ ಪ್ಯಾಂಟ್ ಒಳಗೆ ನಾಗರ ಹಾವು ಬಂದು ಸೇರಿತ್ತು.
ಹರಿಬರಿಯಲ್ಲಿ ಪ್ಯಾಂಟ್ ಧರಿಸಲು ಮುಂದಾಗುತ್ತಾರೆ. ಆಗ ಬುಸ್ ಅಂತಾ ಹೆಡೆ ಎತ್ತಿ ಕಚ್ಚಲು ಮುಂದಾಗಿದೆ.
ಹಾವನ್ನು ನೋಡಿದ ಮಾಂತೇಶ್ ಪ್ಯಾಂಟ್ ಎಸೆದು ಹಾವಿನಿಂದ ಬಚಾವ್ ಆಗಿದ್ದಾರೆ. ನಂತರ ಉರಗ ತಜ್ಞರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಹಾವನ್ನು ರಕ್ಷಿಸಿ ಕಾಡಿಗೆ ಬಿಟ್ಟದ್ದಾರೆ.
https://www.newsics.com/2025/04/12/mother-saves-two-children-from-fire-2/