Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > VISHU FESTIVAL ಕರಾವಳಿಯಾದ್ಯಂತ ಬಿಸು ಪರ್ವ ಆಚರಣೆ
ಲೈಫ್‌ಸ್ಟೈಲ್

VISHU FESTIVAL ಕರಾವಳಿಯಾದ್ಯಂತ ಬಿಸು ಪರ್ವ ಆಚರಣೆ

Share
1 Min Read
SHARE

newsics.com

ತುಳುನಾಡಿನಲ್ಲಿ ‘ಬಿಸು’ವಾಗಿಯೂ ಕೇರಳದಲ್ಲಿ ‘ವಿಷು’ವಾಗಿಯೂ ಅಚರಿಸಲ್ಪಡುವ ಸೌರಯುಗಾದಿ ಹಬ್ಬವೂ ಸುಗ್ಗಿ ಮತ್ತು ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಸೌರಮಾನ ಪಂಚಾಂಗದ ಪ್ರಕಾರ ಸೌರಯುಗಾದಿಯನ್ನು ಆಚರಣೆ ಮಾಡಲಾಗುತ್ತದೆ. ಈ ಬಾರಿಯ ಹಬ್ಬವನ್ನು ಎ. 14 ರಂದು ಆಚರಿಸಲಾಗುತ್ತದೆ. ಜೊತೆಗೆ ಈ ದಿನ ಮೀನ ಮಾಸವು ಮುಗಿದು ಮೇಷ ಮಾಸ ಆರಂಭವಾಗುತ್ತದೆ. ಇದರ ಬಳಿಕ ಕೃಷಿಕರು ವಿವಿಧ ರೀತಿಯ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ.

ತುಳು ಸಂಸ್ಕೃತಿ ಕೃಷಿಯ ಜೊತೆಗೆ ಮಿಳಿತಗೊಂಡಿದೆ. ಆದ್ದರಿಂದ, ಬಿಸು ಪರ್ಬದಲ್ಲೂ ಕಣಿ ಇಡುವುದು, ಬುಳೆ ಕಾಣಿಕೆ ಒಪ್ಪಿಸುವುದು, ಎಣೇಲು ಬೇಸಾಯಕ್ಕೆ ಮುಹೂರ್ತ ‘ಕೈ ಬಿತ್ ಹಾಕುವುದು’ ಮುಂತಾದ ಆಚರಣೆ ಇದೆ. ಇವೆಲ್ಲದರಲ್ಲಿ ನಾವು ಕೃಷಿ ಪ್ರಾಧಾನ್ಯತೆಯನ್ನು ಕಾಣಬಹುದು

ಈ ದಿನ ತಮ್ಮ ಮನೆಗಳಲ್ಲಿ ಹೊಸ ವರ್ಷದ ಆಚರಣೆ ಮಾಡುತ್ತಾರೆ. ಪೂಜಾ ಪದ್ದತಿಗಳನ್ನು ಅನುಸರಿಸುವ ಮೂಲಕ ಪುಣ್ಯ ಕ್ಷೇತ್ರಗಳ ಭೇಟಿ ನೀಡಿ, ತೀರ್ಥ ಕ್ಷೇತ್ರಗಳಲ್ಲಿ ಸ್ನಾನ ಮಾಡುವುದರ ಜೊತೆಗೆ ದೇವಸ್ಥಾನಗಳಲ್ಲಿ ದಾನ -ಧರ್ಮಗಳನ್ನು ಮಾಡುವುದು, ತರ್ಪಣ ಬಿಡುವುದಕ್ಕೆ ಇದು ಪ್ರಶಸ್ತಕಾಲವಾಗಿರುತ್ತದೆ.

ಬಿಸು ಹಬ್ಬದಂದು ಬೆಳಗ್ಗೆ ಬೇಗನೇ ಎದ್ದು ಇಲ್ಲವೇ ಅದರ ಮುನ್ನಾ ದಿನವೇ ಮನೆಯ ಯಜಮಾನ ಅನುಕೂಲಕ್ಕೆ ತಕ್ಕಂತೆ ದೈವಸ್ಥಾನ, ದೇವರು ಅಥವಾ ತುಳಸಿಕಟ್ಟೆಯ ಎದುರು ಎರಡು ಜೋಡಿ ಬಾಳೆ ಎಲೆಯಲ್ಲಿ ಒಂದು ಮಣೆ ಇಡುತ್ತಾರೆ. ಅದರ ಮೇಲೆ ದೀಪವಿಟ್ಟು ಅದರ ಎಡ ಬಲಗಳಲ್ಲಿ ಹೂವು, ಅಕ್ಕಿ, ಹಣ್ಣು, ತರಕಾರಿ, ತೆಂಗಿನಕಾಯಿ ಇಟ್ಟು ಅದರ ಮಧ್ಯಭಾಗದಲ್ಲಿ ಕನ್ನಡಿ ಇಡುತ್ತಾರೆ.

ಈ ದಿನ ಮುಂಜಾನೆ ಎದ್ದು ಮನೆಗಳಲ್ಲಿ ಸಿದ್ಧಪಡಿಸಿದ ಕಣಿ ಕಂಡು ಆ ಬಳಿಕ ಹತ್ತಿರದ ದೇವಸ್ಥಾನ, ದೈವಸ್ಥಾನ, ಮಠ, ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ಇಲ್ಲಿನ ದೇವಸ್ಥಾನಗಳಲ್ಲೂ ಕಣಿ ಸಿದ್ಧಪಡಿಸಲಾಗುತ್ತದೆ. ಹಾಗಾಗಿಯೇ ಸೌರಯುಗಾದಿಯು ತುಳುನಾಡಿನಲ್ಲಿ “ಕಣಿ ಕಾಣುವ ಹಬ್ಬ” ಎಂದೇ ಪ್ರಸಿದ್ದಿಯಾಗಿದೆ. ವರುಷದ ಆರಂಭದಲ್ಲಿ ಮೊದಲಿಗೆ ಆರಾಧ್ಯ ದೇವರು ಅಥವಾ ಮನೆ ದೇವರನ್ನು ಕಾಣುವ ಅಥವಾ ನೋಡುವ ಕ್ರಮವನ್ನು ಕಣಿ ಕಾಣುವುದು ಎನ್ನಲಾಗುತ್ತದೆ.

https://www.newsics.com/2025/04/14/this-woman-travels-to-japan-and-korea-to-buy-clothes-for-her-pet-dog/

TAGGED:#vishufestival #life #traditional #manglore #ಕರಾವಳಿ
Share This Article
Facebook Twitter Copy Link Print
Previous Article Pet dog ಸಾಕುನಾಯಿಗೆ ಬಟ್ಟೆ ಖರೀದಿಸಲು ಜಪಾನ್‌, ಕೊರಿಯಾಕ್ಕೆ ಹೋಗ್ತಾಳೆ ಈ ಮಹಿಳೆ
Next Article Toe Ring ವಿವಾಹಿತ ಮಹಿಳೆಯರೇಕೆ ಕಾಲುಂಗುರ ಧರಿಸುತ್ತಾರೆ?ಅದಕ್ಕಿರುವ ಕಾಳಜಿ-ಕಾರಣವೇನು?

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?