newsics.com
ಬೆಂಗಳೂರು: ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದ್ದ ಹಿರಿಯ ಪತ್ರಕರ್ತ ಶಾಮಿ (ಎಸ್.ಕೆ. ಶ್ಯಾಮ್ಸುಂದರ್) (72) ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲ ದಿನಗಳ ಹಿಂದೆ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್ಸುಂದರ್ ಅವರನ್ನು ವಿದ್ಯಾಪೀಠ ಸರ್ಕಲ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು. ಕನ್ನಡಪ್ರಭ, ಒನ್ ಇಂಡಿಯಾದಲ್ಲಿ ಕಾರ್ಯನಿರ್ವಹಿಸಿದ್ದ ಶ್ಯಾಮ್ಸುಂದರ್ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದ್ದರು. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಜನಪ್ರಿಯರಾಗಿದ್ದರು.
ಅವಿವಾಹಿತರಾಗಿದ್ದ ಶ್ಯಾಮ್ಸುಂದರ್ ಅವರು ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು.
Pet dog ಸಾಕುನಾಯಿಗೆ ಬಟ್ಟೆ ಖರೀದಿಸಲು ಜಪಾನ್, ಕೊರಿಯಾಕ್ಕೆ ಹೋಗ್ತಾಳೆ ಈ ಮಹಿಳೆ
860ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದರೂ ಜೀವನ ನಡೆಸೋದೇ ಕಷ್ಟ ಆಗಿತ್ತು