Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಸಿಗಲಿಲ್ಲ-  ಸಂಚಲನ ಸೃಷ್ಟಿಸಿದ ವಿವಾದ
ಕರ್ನಾಟಕಪ್ರಮುಖ

ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಸಿಗಲಿಲ್ಲ-  ಸಂಚಲನ ಸೃಷ್ಟಿಸಿದ ವಿವಾದ

Share
2 Min Read
SHARE

newsics.com

Contents
ಪುರುಷರ ವಸ್ತ್ರ ಸಂಹಿತೆಮಹಿಳೆಯರ ವಸ್ತ್ರ ಸಂಹಿತೆ

ಬೆಂಗಳೂರು: ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದೆ. ಕೊನೆಯ ದಿನವಾದ ನಿನ್ನೆ, ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರೋದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಪುರುಷರ ವಸ್ತ್ರ ಸಂಹಿತೆ

  • ಪರೀಕ್ಷೆ ದಿನ ಪೂರ್ಣ ತೋಳಿನ ಬಟ್ಟೆ ಧರಿಸುವ ಹಾಗಿಲ್ಲ
  • ಕಾಲರ್ ರಹಿತ ನಾರ್ಮಲ್ ಶರ್ಟ್/ ಟೀ ಶರ್ಟ್ ಗೆ ಆದ್ಯತೆ
  • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬು ಕಡಿಮೆಯಿರುವ ಪ್ಯಾಂಟ್)
  • ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಅವಕಾಶ ಇಲ್ಲ
  • ಪರೀಕ್ಷಾ ಹಾಲ್ ಒಳಗೆ ಶೂ ಧರಿಸುವ ಹಾಗಿಲ್ಲ
  • ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣ ಧರಿಸುವ ಹಾಗಿಲ್ಲ
  • ಕಿವಿಯೋಲೆ ಕಡಗ ಧರಿಸುವ ಹಾಗಿಲ್ಲ.

ಮಹಿಳೆಯರ ವಸ್ತ್ರ ಸಂಹಿತೆ

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ ಹೂ ಬಟನ್ ಹೊಂದಿರುವ ಬಟ್ಟೆ ಧರಿಸುವುದು ನಿಷೇಧ.
  • ಪರೀಕ್ಷೆ ದಿನ ಪೂರ್ಣ ತೋಳಿನ ಬಟ್ಟೆಯನ್ನು ಜೀನ್ಸ್ ಧರಿಸಬಾರದು.
  • ಬದಲಾಗಿ ಅರ್ಧ ತೋಳಿನ ಬಟ್ಟೆ ಮುಜುಗರ ಆಗದಿರುವಂತಹ ಬಟ್ಟೆ ಧರಿಸಬೇಕು ದಪ್ಪ ಹೀಲ್ಸ್ ಬಳಸುವುದು ನಿಷೇಧ.
  • ದಪ್ಪವಾದ ಶೂ ದಪ್ಪವಾದ ಚಪ್ಪಲಿ, ಅತಿ ತೆಳುವಾದ ಶೂ ಅತಿ ತೆಳುವಾದ ಚಪ್ಪಲಿ ನಿಷೇಧ.
  • ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣ ಧರಿಸುವುದು ನಿಷೇಧ.
  • ಕಿವಿ ಓಲೆ ಉಂಗುರ ಧರಿಸುವ ಹಾಗಿಲ್ಲ.
  • ಮಂಗಳ ಸೂತ್ರ ಮತ್ತು ಕಾಲುಂಗುರ ಧರಿಸಲು ಅವಕಾಶ.

ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ (ಕೆಎಎಸ್) ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ ಮತ್ತು ಕಾಲುಂಗುರ ತೆಗೆಸಿರುವ ಪ್ರಕರಣ ನಡೆದಿದ್ದವು. ಇದು ಭಾರೀ ವಿವಾದ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಕೆಇಎ ಮಂಗಳಸೂತ್ರ ಮತ್ತು ಕಾಲುಂಗುರಕ್ಕೆ ಅವಕಾಶ ನೀಡಿತ್ತು. ಆದ್ರೆ, ಇದೀಗ ಜನಿವಾರ ವಿವಾದ ಹುಟ್ಟುಹಾಕಿದೆ.

ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ತೀರ್ಥಹಳ್ಳಿಯ ಬ್ರಾಹ್ಮಣ ವಿದ್ಯಾರ್ಥಿ ಅಭಿಜ್ಞಾ ಧರಿಸಿದ್ದ ಜನಿವಾರ ಮತ್ತು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿ ದಾರವನ್ನು ತೆಗೆಸಿದ್ದಾರೆ. ಈ ವಿಚಾರ ಕ್ಷಣಮಾತ್ರದಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಪರೀಕ್ಷಾ ಸಿಬ್ಬಂದಿಯ ನಡೆಯನ್ನು ಖಂಡಿಸಿದ್ದಾರೆ.

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಷ್ಟೇ ಅಲ್ಲದೆ, ಸಿಬ್ಬಂದಿ ಅದನ್ನು ತುಂಡು ಮಾಡಿ ಕಸದ ಬುಟ್ಟಿಗೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ

TAGGED:Didn't get a chance to take the CET exam because I didn't take January - a controversy that created a stir
Share This Article
Facebook Twitter Copy Link Print
Previous Article Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ
Next Article CET Exam: ಜನಿವಾರ ವಿವಾದ:  ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳಿದ ಕೆಇಎ ಅಧಿಕಾರಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?