newsics.com
ಬೀದರ್: ಬೀದರ್ ಸಾಯಿಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯದೆ ಇದ್ದ ಕಾರಣದಿಂದ ಸಿಇಟಿ ಗಣಿತ ಪರೀಕ್ಷೆಯಿಂದಲೇ ಹೊರಗುಳಿದಿದ್ದು, ಆತನ ಎಂಜಿನಿಯರಿಂಗ್ ಕನಸು ನುಚ್ಚು ನೂರಾಗಿದೆ.
ಬೀದರ್ನಲ್ಲಿ ಬುಧವಾರ ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ವೇಳೆ ಜನಿವಾರ ಹಾಕಿಕೊಂಡು ಪರೀಕ್ಷೆಗೆ ಹಾಜರಾಗಲು ಅನುಮತಿಸಿದ್ದ ಅಧಿಕಾರಿಗಳು, ಗುರುವಾರ ಗಣಿತ ಪರೀಕ್ಷೆ ವೇಳೆ ಆಕ್ಷೇಪಿಸಿದ್ದಾರೆ. ಬೆಳಗ್ಗೆ 10ಕ್ಕೆ ಪರೀಕ್ಷಾ ಕೇಂದ್ರದ ಹೊರಗಡೆ ತಪಾಸಣೆ ಸಂದರ್ಭದಲ್ಲಿ ಜನಿವಾರ ತೆಗೆದು ಹಾಕಿ ಅಥವಾ ಕತ್ತರಿಸಿಕೊಂಡು ಬರುವಂತೆ ಸೂಚಿಸಿದ್ದಾರೆ.
ಕೆಲಸ ನಿಮಿತ್ತ ಪೋಷಕರು ಪರೀಕ್ಷಾ ಕೇಂದ್ರದ ಹತ್ತಿರ ಬಂದಿರಲಿಲ್ಲ. ಹೀಗಾಗಿ ವಿದ್ಯಾರ್ಥಿಯು ದೂರವಾಣಿ ಮೂಲಕ ಪಾಲಕರನ್ನು ಸಂಪರ್ಕಿಸಿದಾಗ ಜನಿವಾರ ತೆಗೆಯಲಾಗದು ಎಂದಿದ್ದಾರೆ. ಈ ವಿಷಯವನ್ನು ವಿದ್ಯಾರ್ಥಿ ಅಧಿಕಾರಿಗಳಿಗೆ ತಿಳಿಸಿ ಅಂಗಲಾಚಿ ಬೇಡಿದರೂ ಪರೀಕ್ಷೆಗೆ ಹಾಜರಾಗಲು ಅನುಮತಿಸಿಲ್ಲ. ಹೀಗಾಗಿ ಆ ವಿದ್ಯಾರ್ಥಿ ಪರೀಕ್ಷೆಯಿಂದಲೇ ಹೊರಗುಳಿದಿದ್ದಾನೆ. ಆದರೆ ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ಬರೆಯಲು ಆತನಿಗೆ ಅನುಮತಿಸಿದ್ದಾರೆ!
ಇದೀಗ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿವೆ.
https://www.newsics.com/2025/04/18/are-you-throwing-potato-peels-at-me/