newsics.com
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ರಚತ್ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಈ ವರ್ಷ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಬಾಲಕನ ಸಾವಿನ ಬಗ್ಗೆ ಒಂದು ವಾರದೊಳಗೆ ವರದಿ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಉಲ್ಭಣಗೊಳ್ಳುತ್ತಿದ್ದು, ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ.
ಇನ್ನು ಬೇಸಿಗೆ ತಿಂಗಳಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪರದಾಡುತ್ತಿದ್ದಾರೆ. ಹೀಗಾಗಿ ಕಾಡಿನಂಚಿನಲ್ಲಿ ನೆಲಸಿರುವ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು