newsics.com
ಬೆಂಗಳೂರು : ಕಾಂಟ್ರವರ್ಸಿ ಹೇಳಿಕೆ ಮೂಲಕ ಸದ್ದು ಮಾಡುವ ಪ್ರಸಿದ್ಧ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಕೊಟ್ಟು ಸಂಚಲನ ಮೂಡಿಸುತ್ತಿದ್ದಾರೆ.
ಉಜಿರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೂಲಿಬೆಲೆ, ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ.
ಇತ್ತೀಚೆಗೆ ಭಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಹೆಚ್ಚಿಸಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡುತ್ತೇವೆ ಎಂದಿದ್ದಾರೆ. ಆದರೆ ನಮ್ಮ ಜನರು 2-3 ಮಕ್ಕಳನ್ನು ಮಾಡ್ತಾರಾ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಕ್ಚರ್ ಹಾಕಲು ಕಳುಹಿಸಲು ಇಷ್ಟವಿಲ್ಲ. ಅವರಿಗೆ ನಮ್ಮ ಮಕ್ಕಳು ಚನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಬೇಕು ಅನ್ನೋದಷ್ಟೇ ಆಸೆ. ಹಾಗಾಗಿ ಓದಿಸೋ ಕೆಪಾಸಿಟಿ ಇಲ್ಲದ ಕಾರಣಕ್ಕೆ ಒಂದು ಸಾಕು, ಎರಡು ಸಾಕು ಅಂತಾರೆ. ಸರ್ಕಾರ ನಮಗಾಗಿ ಮಾಡಿರುವ ಕಾನೂನು ಬಳಸಿಕೊಳ್ಳಬೇಕು. ಪೊಲೀಸರಿಗೂ ಹೇಳುತ್ತಿದ್ದೇನೆ. ಇದು ಸರ್ಕಾರ ಕೊಟ್ಟ ಕಾನೂನು. ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಹೊಸ ಸರ್ಕಾರ ಆ ಕಾನೂನು ತೆಗೆದು ಹಾಕಿತು. ಅಂದರೆ ಇದರರ್ಥ ನೀವೂ ಕೂಡ ಮತಾಂತರ ಮಾಡಬಹುದು ಎಂದರು.
ಸರ್ಕಾರವೇ ಮತಾಂತರ ಮಾಡಿ ಎಂದು ಹೇಳಿದೆ. ಹಾಗಿದ್ದಾಗ ನಾವೂ ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲಿಯೂ ಈ ರೀತಿ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ. ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥಹ ಕಾನೂನುಗಳು ನಮ್ಮಲ್ಲಿವೆ. ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕು ಎಂದು ಕರೆ ಕೊಟ್ಟಿದ್ದಾರೆ.
Life style ನೈಟ್ ಪೂರ್ತಿ ನಿದ್ದೆ ಬರ್ತಿಲ್ವಾ?: ಈ ಸೂತ್ರ ಟ್ರೈ ಮಾಡಿದ್ರೆ ಫಲಿತಾಂಶ ಪಕ್ಕಾ